Categories: CrimeLatest

ಭಟ್ಕಳದಲ್ಲಿ ಗಾಂಜಾ ಜಾಲಕ್ಕೆ ಪೊಲೀಸ್ ಬ್ರೇಕ್: ಕಾರು ಸಮೇತ ಯುವಕ ಅರೆಸ್ಟ್

ಭಟ್ಕಳ: ಅಕ್ರಮ ಗಾಂಜಾ ಮಾರಾಟ ಜಾಲದ ವಿರುದ್ಧ ಭಟ್ಕಳ ಶಹರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಯುವಕನೊಬ್ಬನನ್ನು ಬಂಧಿಸಿ, ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಹೆಬಳೆ ನಿವಾಸಿ 24 ವರ್ಷದ ಅಬ್ರಾರ್ ಶೇಖ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಭಟ್ಕಳ ನಗರದ ಮುಗ್ಗುಂಕಾಲೋನಿಯ ಮೌಂಟೆನ್ ಗ್ರೌಂಡ್ ಸಮೀಪ ಈ ದಾಳಿ ನಡೆಸಲಾಗಿದೆ.

ಆರೋಪಿಯು ಯಾವುದೇ ಕಾನೂನುಬದ್ಧ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಸಂಗ್ರಹಿಸಿ ಇಟ್ಟಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಸುಮಾರು 84 ಗ್ರಾಂ ತೂಕದ, ಅಂದಾಜು ₹5,000 ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಗಾಂಜಾವನ್ನು ಸಣ್ಣ ಪ್ಯಾಕೆಟ್‌ಗಳಾಗಿ ಪ್ಯಾಕ್ ಮಾಡಲು ಬಳಸಲಾಗುತ್ತಿದ್ದ 12 ಖಾಲಿ ಪ್ಲಾಸ್ಟಿಕ್ ಸ್ಯಾಚೆಟ್‌ಗಳನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.

ಇದೇ ವೇಳೆ ಗಾಂಜಾ ಸಾಗಾಟ ಹಾಗೂ ಸಂಗ್ರಹಕ್ಕಾಗಿ ಬಳಸಲಾಗುತ್ತಿದ್ದ ಅಂದಾಜು ₹5 ಲಕ್ಷ ಮೌಲ್ಯದ ಬಿಳಿ ಬಣ್ಣದ ಹೊಂಡಾ ಸಿಟಿ ಕಾರನ್ನೂ ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಭಟ್ಕಳ ಶಹರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ನವೀನ್ ಎಸ್. ನಾಯ್ಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಪಿಎಸ್‌ಐ ಸೋಮರಾಜ ಟಿ. ರಾಠೋಡ್ ಅವರು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

13 hours ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

13 hours ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

13 hours ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

14 hours ago

ಮಳೆಗಾಲದ ಸೊಬಗಿನಲ್ಲಿ ಮಿಂದೇಳಿದ ಕಪ್ಪತ್ತಗುಡ್ಡ: ಪರಿಸರ ಪ್ರಿಯರನ್ನು ಕೈಬೀಸಿ ಕರೆಯುತ್ತಿರುವ ಉತ್ತರ ಕರ್ನಾಟಕದ ಸಹ್ಯಾದ್ರಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…

17 hours ago

ಹುಬ್ಬಳ್ಳಿಯಲ್ಲಿ ರೈಲ್ವೆ ಹಳಿ ಪಕ್ಕ ಯುವಕನ ಶವ ಪತ್ತೆ; ಪತ್ನಿಯೊಂದಿಗೆ ಕಲಹದ ಬಳಿಕ ವ್ಯಸನಕ್ಕೆ ಬಿದ್ದಿದ್ದ ಆರೋಪ

ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…

1 day ago