Categories: CrimeLatest

ಭಟ್ಕಳದಲ್ಲಿ ಗಾಂಜಾ ಜಾಲಕ್ಕೆ ಪೊಲೀಸ್ ಬ್ರೇಕ್: ಕಾರು ಸಮೇತ ಯುವಕ ಅರೆಸ್ಟ್

ಭಟ್ಕಳ: ಅಕ್ರಮ ಗಾಂಜಾ ಮಾರಾಟ ಜಾಲದ ವಿರುದ್ಧ ಭಟ್ಕಳ ಶಹರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಯುವಕನೊಬ್ಬನನ್ನು ಬಂಧಿಸಿ, ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಹೆಬಳೆ ನಿವಾಸಿ 24 ವರ್ಷದ ಅಬ್ರಾರ್ ಶೇಖ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಭಟ್ಕಳ ನಗರದ ಮುಗ್ಗುಂಕಾಲೋನಿಯ ಮೌಂಟೆನ್ ಗ್ರೌಂಡ್ ಸಮೀಪ ಈ ದಾಳಿ ನಡೆಸಲಾಗಿದೆ.

ಆರೋಪಿಯು ಯಾವುದೇ ಕಾನೂನುಬದ್ಧ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಸಂಗ್ರಹಿಸಿ ಇಟ್ಟಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಸುಮಾರು 84 ಗ್ರಾಂ ತೂಕದ, ಅಂದಾಜು ₹5,000 ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಗಾಂಜಾವನ್ನು ಸಣ್ಣ ಪ್ಯಾಕೆಟ್‌ಗಳಾಗಿ ಪ್ಯಾಕ್ ಮಾಡಲು ಬಳಸಲಾಗುತ್ತಿದ್ದ 12 ಖಾಲಿ ಪ್ಲಾಸ್ಟಿಕ್ ಸ್ಯಾಚೆಟ್‌ಗಳನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.

ಇದೇ ವೇಳೆ ಗಾಂಜಾ ಸಾಗಾಟ ಹಾಗೂ ಸಂಗ್ರಹಕ್ಕಾಗಿ ಬಳಸಲಾಗುತ್ತಿದ್ದ ಅಂದಾಜು ₹5 ಲಕ್ಷ ಮೌಲ್ಯದ ಬಿಳಿ ಬಣ್ಣದ ಹೊಂಡಾ ಸಿಟಿ ಕಾರನ್ನೂ ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಭಟ್ಕಳ ಶಹರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ನವೀನ್ ಎಸ್. ನಾಯ್ಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಪಿಎಸ್‌ಐ ಸೋಮರಾಜ ಟಿ. ರಾಠೋಡ್ ಅವರು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಆರೋಗ್ಯ ಇಲಾಖೆಯಲ್ಲಿ 1290 ವೈದ್ಯರ ನೇಮಕಾತಿಗೆ ಸರ್ಕಾರದ ನಿರ್ಧಾರ; 5 ವರ್ಷ ಸೇವೆಯ ಬಳಿಕ ಕಾಯಂ ಹುದ್ದೆಗೆ ಅವಕಾಶ

ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಒಟ್ಟು 1290…

14 hours ago

ವಿದ್ಯಾರ್ಥಿಯ ಸಾವಿನ ಬಗ್ಗೆ ಅನುಮಾನ: ಸಿಸಿಟಿವಿ ದೃಶ್ಯಾವಳಿ ಬಹಿರಂಗಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ಸಿದ್ದಾಪುರ: ತಾಲೂಕಿನ ಕಾನಸೂರಿನ ಗಟ್ಟಿಕೈ ಕ್ರಾಸ್ ಬಳಿ, ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ…

14 hours ago

ಮುಂಡಗೋಡಿನ ಇಬ್ಬರು ಕುಖ್ಯಾತ ರೌಡಿ ಶೀಟರ್‌ಗಳು ಗೂಂಡಾ ಕಾಯ್ದೆಯಡಿ ಬಂಧನ; ಬಳ್ಳಾರಿ ಕಾರಾಗೃಹಕ್ಕೆ ರವಾನೆ

ಮುಂಡಗೋಡ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ಕುಖ್ಯಾತ ರೌಡಿ ಆಸಾಮಿಗಳ…

14 hours ago

ರಸಗೊಬ್ಬರ ಖರೀದಿಗೆ ಮುಗಿಬಿದ್ದ ರೈತ ಸಮೂಹ,ಕಡಿಮೆ ಪ್ರಮಾಣದಲ್ಲಿ ಬಿದ್ದ ಮುಂಗಾರು ಮಳೆ; ಬಿತ್ತನೆ ಕಾರ್ಯ ಚುರುಕು.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತವು ಯೂರಿಯಾ ರಸಗೊಬ್ಬರವನ್ನು ವಿತರಿಸುವಾಗ…

15 hours ago

ರೆಸಾರ್ಟ್ ನಿರ್ಮಾಣಕ್ಕೆ ಹೊಳೆ ಪ್ರದೇಶ ಹಾನಿ?: ಸ್ಥಳೀಯರಿಂದ ಸಮಗ್ರ ತನಿಖೆಗೆ ಒತ್ತಾಯ

ಭಟ್ಕಳ ತಾಲ್ಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವೆಂಕಟಾಪುರ ಹೊಳೆ ಪ್ರದೇಶದಲ್ಲಿ ಪರಿಸರ ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪ…

2 days ago

110 ಕೆವಿ ಲೈನ್ ಕಾಮಗಾರಿ ವಿಳಂಬಕ್ಕೆ ರೈತರ ಆಕ್ರೋಶ, ಶೀಘ್ರ ಅನುಷ್ಠಾನಕ್ಕೆ ಒತ್ತಾಯ

ಶಿವಮೊಗ್ಗ: ಸಾಗರ ತಾಲೂಕಿನ ಉಳ್ಳೂರುದಿಂದ ತ್ಯಾಗರ್ತಿವರೆಗೆ ನಿರ್ಮಾಣಗೊಳ್ಳುತ್ತಿರುವ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿರುವ ರೈತರು ಮತ್ತು…

2 days ago