ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರನಗರದ 20ನೇ ಕ್ರಾಸ್ ಬಳಿ ಇರುವ ಅಪಾರ್ಟ್ಮೆಂಟ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮಾನವ ಕಳ್ಳಸಾಗಣೆಗಾಗಿ ಬಳಸಲಾಗುತ್ತಿದ್ದ ಮಹಿಳೆಯೊಬ್ಬರನ್ನು ರಕ್ಷಿಸಲಾಗಿದೆ.
ಬಂಧಿತನನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಜಳವಳ್ಳಿ ಗ್ರಾಮದ ನಿವಾಸಿ ಗಣೇಶ್ ಗಣಪ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಅಪಾರ್ಟ್ಮೆಂಟ್ನ ಮೊದಲ ಮಹಡಿಯ ರೂಮ್ ಸಂಖ್ಯೆ 103ರಲ್ಲಿ ಮಹಿಳೆಯನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ಬಳಸುತ್ತಿದ್ದು, ಅಕ್ರಮ ಲಾಭಕ್ಕಾಗಿ ಈ ಕಾರ್ಯಚಟುವಟಿಕೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮಾನವ ಕಳ್ಳಸಾಗಣೆ ಮತ್ತು ಅಕ್ರಮ ವೇಶ್ಯಾವಾಟಿಕೆ ತಡೆ ಕಾಯ್ದೆಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಭಟ್ಕಳ: ಉದ್ಯೋಗ ನಿಮಿತ್ತ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಭಟ್ಕಳ ಮೂಲದ ಯುವತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ…
ಕಿತ್ತೂರು: ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಕಿತ್ತೂರು ಪೊಲೀಸರು,…
ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ…
ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ…
ತುಮಕೂರು: ಪ್ರೇಮಿಗಳ ನಡುವಿನ ಮನಸ್ತಾಪ ಭೀಕರ ತಿರುವು ಪಡೆದುಕೊಂಡ ಪರಿಣಾಮ, ಯುವಕನೊಬ್ಬ ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಕಾರಿನಲ್ಲೇ…
ಧಾರವಾಡ: ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ ಪತಿಗೆ ಧಾರವಾಡದ ನಾಲ್ಕನೇ…