Latest

ಅಕ್ರಮ ಹಸು ಸಾಗಾಟ ಭೇದಿಸಿದ ಪೊಲೀಸರು: ಇಬ್ಬರು ಬಂಧನ, 6 ಹಸುಗಳು ರಕ್ಷಣೆ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದಲ್ಲಿ ಭಾನುವಾರ ಪಶು ಸಾಗಾಟದ ವೇಳೆ ಪೊಲೀಸರು ಪಿಕಪ್ ವಾಹನವೊಂದನ್ನು ವಶಪಡಿಸಿ, ಇಬ್ಬರನ್ನು ಬಂಧಿಸಿದ್ದಾರೆ. ಲಕ್ಕವಳ್ಳಿಗೆ ಅಕ್ರಮವಾಗಿ ಆರು ಹಸುಗಳನ್ನು ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಲಕ್ಕವಳ್ಳಿ ಮೂಲದ ಮಣಿ ಎಂಬಾತನು ವಾಹನ ಚಲಾಯಿಸುತ್ತಿದ್ದರೆ, ಕರಣಕುಮಾರ್ ಎಂಬುವನು ಸಹಾಯಕರಾಗಿದ್ದ. ಬಿ.ಎಚ್ ಕೈಮರದ ಬಳಿಯ ಶಾಂತಿಭವನ ಚರ್ಚ್ ಸಮೀಪ ಗಸ್ತುದಲ್ಲಿದ್ದ ಪೊಲೀಸರು ಬಾಳೆಹೊನ್ನೂರು ದಿಕ್ಕಿನಿಂದ ಬರುವ ಪಿಕಪ್ ವಾಹನವನ್ನು ತಪಾಸಣೆ ನಡೆಸಿದಾಗ, ಅದರಲ್ಲಿ ಐದು ಹೋರಿ ಮತ್ತು ಒಂದು ದನವನ್ನು ಪತ್ತೆ ಹಚ್ಚಿದರು.

ಪಶು ಸಾಗಾಟಕ್ಕೆ ಅಗತ್ಯವಿರುವ ಯಾವುದೇ ದಾಖಲೆಗಳು ಈ ಇಬ್ಬರೂ ಬಳಿ ಇರಲಿಲ್ಲ. ವಿಚಾರಣೆ ವೇಳೆ ಹಸುಗಳನ್ನು ವಧೆಗೊಳಿಸಲು ಖರೀದಿಸಿರುವುದಾಗಿ ಆರೋಪಿಗಳು ಪೊಲೀಸರಿಗೆ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಕಾರ್ಯಾಚರಣೆಯನ್ನು ಸಬ್ ಇನ್‌ಸ್ಪೆಕ್ಟರ್ ನಿರಂಜನಗೌಡ ನೇತೃತ್ವದಲ್ಲಿ ನಡೆಸಲಾಗಿದ್ದು, ಸಿಬ್ಬಂದಿಯಾದ ಮಧು, ಪರಮೇಶ್ವರ್ ಮತ್ತು ಕೌಶಿಕ್ ಕೂಡ ಪಾಲ್ಗೊಂಡಿದ್ದರು.

ಈ ಸಂಬಂಧ ಪಶು ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗುತ್ತಿದೆ. ವರದಿ ನಜೀರ್ ಅಹ್ಮದ್

nazeer ahamad

Recent Posts

ಗಂಡನ ಬೆಂಬಲದಿಂದ ಸರ್ಕಾರಿ ಉದ್ಯೋಗ ಪಡೆದ ಪತ್ನಿ: ದೂರವಾಗಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ

ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…

5 hours ago

ಮಲೆನಾಡಿನಲ್ಲಿ ನಿಗೂಢವಾಗಿ ಹಾರಾಡಿದ್ದ ವಿಮಾನದ ರಹಸ್ಯ ಬಯಲು..!

ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…

5 hours ago

ಧಾರವಾಡ ಅರಣ್ಯದಲ್ಲಿ ದಾರುಣ ಘಟನೆ: ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರ

ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…

16 hours ago

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲೇ ಹೆಚ್ಚಿನ ಕೊರತೆ

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…

21 hours ago

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…

22 hours ago

‘ಧುರಂಧರ್’ ಸಿನಿಮಾ ಪ್ರಭಾವವೇ? ಪಾಕಿಸ್ತಾನದಲ್ಲಿ ಗುಪ್ತಚರ ಶೋಧದ ವಿಡಿಯೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…

1 day ago