ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದಲ್ಲಿ ಭಾನುವಾರ ಪಶು ಸಾಗಾಟದ ವೇಳೆ ಪೊಲೀಸರು ಪಿಕಪ್ ವಾಹನವೊಂದನ್ನು ವಶಪಡಿಸಿ, ಇಬ್ಬರನ್ನು ಬಂಧಿಸಿದ್ದಾರೆ. ಲಕ್ಕವಳ್ಳಿಗೆ ಅಕ್ರಮವಾಗಿ ಆರು ಹಸುಗಳನ್ನು ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಲಕ್ಕವಳ್ಳಿ ಮೂಲದ ಮಣಿ ಎಂಬಾತನು ವಾಹನ ಚಲಾಯಿಸುತ್ತಿದ್ದರೆ, ಕರಣಕುಮಾರ್ ಎಂಬುವನು ಸಹಾಯಕರಾಗಿದ್ದ. ಬಿ.ಎಚ್ ಕೈಮರದ ಬಳಿಯ ಶಾಂತಿಭವನ ಚರ್ಚ್ ಸಮೀಪ ಗಸ್ತುದಲ್ಲಿದ್ದ ಪೊಲೀಸರು ಬಾಳೆಹೊನ್ನೂರು ದಿಕ್ಕಿನಿಂದ ಬರುವ ಪಿಕಪ್ ವಾಹನವನ್ನು ತಪಾಸಣೆ ನಡೆಸಿದಾಗ, ಅದರಲ್ಲಿ ಐದು ಹೋರಿ ಮತ್ತು ಒಂದು ದನವನ್ನು ಪತ್ತೆ ಹಚ್ಚಿದರು.
ಪಶು ಸಾಗಾಟಕ್ಕೆ ಅಗತ್ಯವಿರುವ ಯಾವುದೇ ದಾಖಲೆಗಳು ಈ ಇಬ್ಬರೂ ಬಳಿ ಇರಲಿಲ್ಲ. ವಿಚಾರಣೆ ವೇಳೆ ಹಸುಗಳನ್ನು ವಧೆಗೊಳಿಸಲು ಖರೀದಿಸಿರುವುದಾಗಿ ಆರೋಪಿಗಳು ಪೊಲೀಸರಿಗೆ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಕಾರ್ಯಾಚರಣೆಯನ್ನು ಸಬ್ ಇನ್ಸ್ಪೆಕ್ಟರ್ ನಿರಂಜನಗೌಡ ನೇತೃತ್ವದಲ್ಲಿ ನಡೆಸಲಾಗಿದ್ದು, ಸಿಬ್ಬಂದಿಯಾದ ಮಧು, ಪರಮೇಶ್ವರ್ ಮತ್ತು ಕೌಶಿಕ್ ಕೂಡ ಪಾಲ್ಗೊಂಡಿದ್ದರು.
ಈ ಸಂಬಂಧ ಪಶು ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗುತ್ತಿದೆ. ವರದಿ ನಜೀರ್ ಅಹ್ಮದ್
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…