Latest

ಉಡುಪಿಯಲ್ಲಿ ಮಟ್ಕಾ ಜಾಲ ಭೇದಿಸಿದ ಪೊಲೀಸರು: ಬೃಹತ್ ಕಾರ್ಯಾಚರಣೆಯಲ್ಲಿ 12 ಮಂದಿ ಅರೆಸ್ಟ್.

ಉಡುಪಿ, ಜೂನ್ 2: ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ಮುಂದುವರಿಸಿದ್ದು, ಸೋಮವಾರದಂದು ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಭಾಗವಾಗಿ, ಮಟ್ಕಾ ದಂಧೆ ಮೇಲೆ ಬಿರುಸಿನ ದಾಳಿ ನಡೆದಿದೆ.

ಇದೇ ದಂಧೆಯ ಸಂಬಂಧ ಶಿರ್ವ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಿಂದಿನ ದಿನದಂದು ಬಂಧಿತನಾಗಿದ್ದ ಲಿಯೋ ಕರ್ನೆಲಿಯೋ ಎಂಬ ಮಟ್ಕಾ ಬುಕ್ಕಿಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಉಡುಪಿಯ ವಿವಿಧ ಠಾಣೆ ವ್ಯಾಪ್ತಿಗಳಲ್ಲಿ ಮುಂದುವರೆದ ಕಾರ್ಯಾಚರಣೆಯಲ್ಲಿ 12 ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬಂಧಿತರು ಈ ಕೆಳಗಿನವರು:

ಮಲ್ಪೆ ಠಾಣೆ ವ್ಯಾಪ್ತಿಯಿಂದ: ಹಿರಿಯಡ್ಕ ಪಂಚನಬೆಟ್ಟುವಿನ ಪ್ರಕಾಶ್ ಮೂಲ್ಯ (43) ಮತ್ತು ಮಲ್ಪೆಯ ರತ್ನಾಕರ ಅಮೀನ್ (48)

ಮಣಿಪಾಲದಿಂದ: ಇಂದಿರಾನಗರದ ನಾಗೇಶ್ (56)

ಕೋಟ ಠಾಣೆಯಿಂದ: ಕಾರ್ಕಡದ ವಿಜಯ ನಾಯರಿ (50)

ಉಡುಪಿ ನಗರ ಠಾಣೆಯಿಂದ: ಪೇತ್ರಿಯ ದಿವಾಕರ ಪೂಜಾರಿ (42), ಶಿರಿಬೀಡು ಮಠದ ಬೆಟ್ಟುವಿನ ರಾಮ್‌ರಾಜ್ (44), ಮೂಡಸಗ್ರಿಯ ಜಗದೀಶ್ (39), ಕೊಪ್ಪಳ ಮೂಲದ ಅಂಬಾಗಿಲಿನ ಚಿದಾನಂದ (35), ಮಧ್ವನಗರದ ತಿಪ್ಪೆಸ್ವಾಮಿ (52), ಬಾಬು ನಾಯಕ್ ನಗರದ ರಾಘವೇಂದ್ರ (41), ಉಡುಪಿ ಪುತ್ತೂರಿನ ಉದಯ ಎಸ್. ಭಂಡಾರಿ (45)

ಪಡುಬಿದ್ರಿ ಠಾಣೆಯಿಂದ: ಉಚ್ಚಿಲದ ಮನೋಜ್ ಕುಮಾರ್ (39)

ಈ ಸಂಬಂಧ ಇನ್ನಷ್ಟು ತನಿಖೆ ಮುಂದುವರಿದಿದೆ. ಜಿಲ್ಲೆಯಾದ್ಯಂತ ಮಟ್ಕಾ ಸೇರಿದಂತೆ ಇತರ ಅಕ್ರಮ ಚಟುವಟಿಕೆಗಳ ಮೇಲೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago