Latest

ಉಡುಪಿಯಲ್ಲಿ ಮಟ್ಕಾ ಜಾಲ ಭೇದಿಸಿದ ಪೊಲೀಸರು: ಬೃಹತ್ ಕಾರ್ಯಾಚರಣೆಯಲ್ಲಿ 12 ಮಂದಿ ಅರೆಸ್ಟ್.

ಉಡುಪಿ, ಜೂನ್ 2: ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ಮುಂದುವರಿಸಿದ್ದು, ಸೋಮವಾರದಂದು ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಭಾಗವಾಗಿ, ಮಟ್ಕಾ ದಂಧೆ ಮೇಲೆ ಬಿರುಸಿನ ದಾಳಿ ನಡೆದಿದೆ.

ಇದೇ ದಂಧೆಯ ಸಂಬಂಧ ಶಿರ್ವ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಿಂದಿನ ದಿನದಂದು ಬಂಧಿತನಾಗಿದ್ದ ಲಿಯೋ ಕರ್ನೆಲಿಯೋ ಎಂಬ ಮಟ್ಕಾ ಬುಕ್ಕಿಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಉಡುಪಿಯ ವಿವಿಧ ಠಾಣೆ ವ್ಯಾಪ್ತಿಗಳಲ್ಲಿ ಮುಂದುವರೆದ ಕಾರ್ಯಾಚರಣೆಯಲ್ಲಿ 12 ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬಂಧಿತರು ಈ ಕೆಳಗಿನವರು:

ಮಲ್ಪೆ ಠಾಣೆ ವ್ಯಾಪ್ತಿಯಿಂದ: ಹಿರಿಯಡ್ಕ ಪಂಚನಬೆಟ್ಟುವಿನ ಪ್ರಕಾಶ್ ಮೂಲ್ಯ (43) ಮತ್ತು ಮಲ್ಪೆಯ ರತ್ನಾಕರ ಅಮೀನ್ (48)

ಮಣಿಪಾಲದಿಂದ: ಇಂದಿರಾನಗರದ ನಾಗೇಶ್ (56)

ಕೋಟ ಠಾಣೆಯಿಂದ: ಕಾರ್ಕಡದ ವಿಜಯ ನಾಯರಿ (50)

ಉಡುಪಿ ನಗರ ಠಾಣೆಯಿಂದ: ಪೇತ್ರಿಯ ದಿವಾಕರ ಪೂಜಾರಿ (42), ಶಿರಿಬೀಡು ಮಠದ ಬೆಟ್ಟುವಿನ ರಾಮ್‌ರಾಜ್ (44), ಮೂಡಸಗ್ರಿಯ ಜಗದೀಶ್ (39), ಕೊಪ್ಪಳ ಮೂಲದ ಅಂಬಾಗಿಲಿನ ಚಿದಾನಂದ (35), ಮಧ್ವನಗರದ ತಿಪ್ಪೆಸ್ವಾಮಿ (52), ಬಾಬು ನಾಯಕ್ ನಗರದ ರಾಘವೇಂದ್ರ (41), ಉಡುಪಿ ಪುತ್ತೂರಿನ ಉದಯ ಎಸ್. ಭಂಡಾರಿ (45)

ಪಡುಬಿದ್ರಿ ಠಾಣೆಯಿಂದ: ಉಚ್ಚಿಲದ ಮನೋಜ್ ಕುಮಾರ್ (39)

ಈ ಸಂಬಂಧ ಇನ್ನಷ್ಟು ತನಿಖೆ ಮುಂದುವರಿದಿದೆ. ಜಿಲ್ಲೆಯಾದ್ಯಂತ ಮಟ್ಕಾ ಸೇರಿದಂತೆ ಇತರ ಅಕ್ರಮ ಚಟುವಟಿಕೆಗಳ ಮೇಲೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago