ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ ಬಡಾವಣೆಯ ಕಡೆಗೆ ಸ್ಕೂಟರ್ ನಲ್ಲಿ ಸೌಮ್ಯ ಎಂಬುವರು ಸುಮಾರು ಬೆಳಗ್ಗೆ 9 ಗಂಟೆಗೆ ಮಕ್ಕಳನ್ನು ಶಾಲೆಗೆ ಬಿಟ್ಟು ಹೋಗುತ್ತಿರುವ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಕಣ್ಣಿಗೆ ಕಾರದಪುಡಿ ಎರಚಿ ಮಹಿಳೆಯ ಕುತ್ತಿಗೆಯಲ್ಲಿದ್ದ 40 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ದೋಚಲು ಯತ್ನಿಸಿದ್ದಾನೆ ಅದನ್ನು ಕಿತ್ತುಕೊಳ್ಳಲು ವಿಫಲವಾದ ಬೆನ್ನೆಲು 20 ಗ್ರಾಂ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು 26-10-25 ರಂದು ಬೆಳಗ್ಗೆ 8:00 ಯಲ್ಲಿ ಲಲಿತಾದ್ರಿಪುರ ಗುಡ್ಡದಿಂದ ಲಲಿತಾದ್ರಿಪುರ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಹಾಜರುಪಡಿಸಿರುತ್ತಾರೆ. ಆರೋಪಿ ರಾಜೇಶ್ ನಾಯಕನ ವಿಚಾರಣೆ ಮಾಡಿ ಕಿತ್ತುಕೊಂಡಿದ್ದ 20 ಗ್ರಾಂ ತೂಕದ ಸುಮಾರು 2 ಲಕ್ಷ ಬೆಲೆಬಾಳುವ ಸರವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ವರದಿ: ಬಸವಣ್ಣ
ಭಟ್ಕಳ: ಉದ್ಯೋಗ ನಿಮಿತ್ತ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಭಟ್ಕಳ ಮೂಲದ ಯುವತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ…
ಕಿತ್ತೂರು: ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಕಿತ್ತೂರು ಪೊಲೀಸರು,…
ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ…
ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ…
ತುಮಕೂರು: ಪ್ರೇಮಿಗಳ ನಡುವಿನ ಮನಸ್ತಾಪ ಭೀಕರ ತಿರುವು ಪಡೆದುಕೊಂಡ ಪರಿಣಾಮ, ಯುವಕನೊಬ್ಬ ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಕಾರಿನಲ್ಲೇ…
ಧಾರವಾಡ: ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ ಪತಿಗೆ ಧಾರವಾಡದ ನಾಲ್ಕನೇ…