ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ ಸಮಸ್ಯೆ ಇದ್ದಂತಹ ಮಹಿಳೆ ಜಾಹಿರಾತಿನಲ್ಲಿದ್ದ ಫೋನ್ ನಂಬರ್ ಗಳಿಗೆ ಕರೆ ಮಾಡಿ ಸಮಸ್ಯೆ ಸರಿ ಮಾಡಿಕೊಡಿ ಎಂದು ಕೇಳಿಕೊಂಡಾಗ, ನಿಮ್ಮ ಹೆಸರಿನಲ್ಲಿ ಪೂಜೆ ಮಾಡುತ್ತೇನೆ ರೂ. 7,000.00 ಹಣ ಖರ್ಚಾಗುತ್ತೆ ಎಂದು ಹೇಳಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು, ಪುನಃ ಬೇರೆ ಬೇರೆ ಪೂಜೆ ಮಾಡಬೇಕು ಸಮಸ್ಯೆ ಸರಿ ಆಗುತ್ತೆ ಎಂದು ಹಂತ ಹಂತವಾಗಿ ಒಟ್ಟು ರೂ. 1,16,001.00 ಹಣ ವರ್ಗಾವಣೆ ಮಾಡಿಸಿಕೊಂಡು, ಇನ್ನು ಹಲವು ಸಮಸ್ಯೆ ಗಳಿವೆ ಎಂದು ಹೇಳಿ ಪೂಜೆ ಖರ್ಚಿಗೆ ಹಣ ಕಳುಹಿಸಿ ಎಂದು ಹೇಳಿದಾಗ ಮಹಿಳೆ ಅನುಮಾನಗೊಂಡು ಚಿಕ್ಕಮಗಳೂರು ಜಿಲ್ಲಾ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿದ್ದು.
ಮೇಲ್ಕಂಡಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್ನಲ್ಲಿ ಪರಿಹರಿಸಲಾಗುವುದೆಂದು ನಂಬಿಸಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಆತನಿಂದ ರೂ. 87,500.00 ನಗದು, ಒಂದು ಮೊಬೈಲ್ ಫೋನ್ ಮತ್ತು ಎರಡು ಎಟಿಎಂ ಕಾರ್ಡ್ಗಳನ್ನು ವಶಪಡಿಸಿಕೊಂಡಿರುತ್ತಾರೆ.
ಸದರಿ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸ್ ತಂಡದಲ್ಲಿ ಪಿ.ಐ. ಶ್ರೀ. ಮುತ್ತರಾಜ್, ಪಿ.ಎಸ್.ಐ. ಶ್ರೀ. ನಾಸೀರ್ ಹುಸೇನ್ ಮತ್ತು ಶ್ರೀ. ರಘುನಾಥ್ ಎಸ್. ವಿ., ಎ.ಎಸ್.ಐ. ಶ್ರೀ. ಎಂ. ಸಿ. ಪ್ರಕಾಶ್ ಮತ್ತು ಸಿಬ್ಬಂದಿಗಳಾದ ಶ್ರೀ. ವಿನಾಯಕ ಮತ್ತು ಶ್ರೀ. ಅನ್ವರ್ ಪಾಷಾ ರವರು ಕಾರ್ಯನಿರ್ವಹಿಸಿರುತ್ತಾರೆ.
ಸಾರ್ವಜನಿಕರು ಇಂತಹ ವಂಚನೆಗಳ ಜಾಲಕ್ಕೆ ಬೀಳದೇ ಎಚ್ಚರ ವಹಿಸಲು ತಿಳಿಸಲಾಗಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…