Latest

ಪೂಜೆಗೆಂದು 1 ಲಕ್ಷ ಪಿಕಿರುವ ನಕಲಿ ಜ್ಯೋತಿಷಿ ಪೊಲೀಸರ ಬಲೆಗೆ!

ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ ಸಮಸ್ಯೆ ಇದ್ದಂತಹ ಮಹಿಳೆ ಜಾಹಿರಾತಿನಲ್ಲಿದ್ದ ಫೋನ್ ನಂಬರ್ ಗಳಿಗೆ ಕರೆ ಮಾಡಿ ಸಮಸ್ಯೆ ಸರಿ ಮಾಡಿಕೊಡಿ ಎಂದು ಕೇಳಿಕೊಂಡಾಗ, ನಿಮ್ಮ ಹೆಸರಿನಲ್ಲಿ ಪೂಜೆ ಮಾಡುತ್ತೇನೆ ರೂ. 7,000.00 ಹಣ ಖರ್ಚಾಗುತ್ತೆ ಎಂದು ಹೇಳಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು, ಪುನಃ ಬೇರೆ ಬೇರೆ ಪೂಜೆ ಮಾಡಬೇಕು ಸಮಸ್ಯೆ ಸರಿ ಆಗುತ್ತೆ ಎಂದು ಹಂತ ಹಂತವಾಗಿ ಒಟ್ಟು ರೂ. 1,16,001.00 ಹಣ ವರ್ಗಾವಣೆ ಮಾಡಿಸಿಕೊಂಡು, ಇನ್ನು ಹಲವು ಸಮಸ್ಯೆ ಗಳಿವೆ ಎಂದು ಹೇಳಿ ಪೂಜೆ ಖರ್ಚಿಗೆ ಹಣ ಕಳುಹಿಸಿ ಎಂದು ಹೇಳಿದಾಗ ಮಹಿಳೆ ಅನುಮಾನಗೊಂಡು ಚಿಕ್ಕಮಗಳೂರು ಜಿಲ್ಲಾ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿದ್ದು.
ಮೇಲ್ಕಂಡಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದೆಂದು ನಂಬಿಸಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಆತನಿಂದ ರೂ. 87,500.00 ನಗದು, ಒಂದು ಮೊಬೈಲ್ ಫೋನ್ ಮತ್ತು ಎರಡು ಎಟಿಎಂ ಕಾರ್ಡ್‌ಗಳನ್ನು ವಶಪಡಿಸಿಕೊಂಡಿರುತ್ತಾರೆ.
ಸದರಿ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸ್ ತಂಡದಲ್ಲಿ ಪಿ.ಐ. ಶ್ರೀ. ಮುತ್ತರಾಜ್, ಪಿ.ಎಸ್.ಐ. ಶ್ರೀ. ನಾಸೀರ್ ಹುಸೇನ್ ಮತ್ತು ಶ್ರೀ. ರಘುನಾಥ್ ಎಸ್. ವಿ., ಎ.ಎಸ್.ಐ. ಶ್ರೀ. ಎಂ. ಸಿ. ಪ್ರಕಾಶ್ ಮತ್ತು ಸಿಬ್ಬಂದಿಗಳಾದ ಶ್ರೀ. ವಿನಾಯಕ ಮತ್ತು ಶ್ರೀ. ಅನ್ವರ್ ಪಾಷಾ ರವರು ಕಾರ್ಯನಿರ್ವಹಿಸಿರುತ್ತಾರೆ.
ಸಾರ್ವಜನಿಕರು ಇಂತಹ ವಂಚನೆಗಳ ಜಾಲಕ್ಕೆ ಬೀಳದೇ ಎಚ್ಚರ ವಹಿಸಲು ತಿಳಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…

14 hours ago

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

6 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago