ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ ಸಮಸ್ಯೆ ಇದ್ದಂತಹ ಮಹಿಳೆ ಜಾಹಿರಾತಿನಲ್ಲಿದ್ದ ಫೋನ್ ನಂಬರ್ ಗಳಿಗೆ ಕರೆ ಮಾಡಿ ಸಮಸ್ಯೆ ಸರಿ ಮಾಡಿಕೊಡಿ ಎಂದು ಕೇಳಿಕೊಂಡಾಗ, ನಿಮ್ಮ ಹೆಸರಿನಲ್ಲಿ ಪೂಜೆ ಮಾಡುತ್ತೇನೆ ರೂ. 7,000.00 ಹಣ ಖರ್ಚಾಗುತ್ತೆ ಎಂದು ಹೇಳಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು, ಪುನಃ ಬೇರೆ ಬೇರೆ ಪೂಜೆ ಮಾಡಬೇಕು ಸಮಸ್ಯೆ ಸರಿ ಆಗುತ್ತೆ ಎಂದು ಹಂತ ಹಂತವಾಗಿ ಒಟ್ಟು ರೂ. 1,16,001.00 ಹಣ ವರ್ಗಾವಣೆ ಮಾಡಿಸಿಕೊಂಡು, ಇನ್ನು ಹಲವು ಸಮಸ್ಯೆ ಗಳಿವೆ ಎಂದು ಹೇಳಿ ಪೂಜೆ ಖರ್ಚಿಗೆ ಹಣ ಕಳುಹಿಸಿ ಎಂದು ಹೇಳಿದಾಗ ಮಹಿಳೆ ಅನುಮಾನಗೊಂಡು ಚಿಕ್ಕಮಗಳೂರು ಜಿಲ್ಲಾ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿದ್ದು.
ಮೇಲ್ಕಂಡಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್ನಲ್ಲಿ ಪರಿಹರಿಸಲಾಗುವುದೆಂದು ನಂಬಿಸಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಆತನಿಂದ ರೂ. 87,500.00 ನಗದು, ಒಂದು ಮೊಬೈಲ್ ಫೋನ್ ಮತ್ತು ಎರಡು ಎಟಿಎಂ ಕಾರ್ಡ್ಗಳನ್ನು ವಶಪಡಿಸಿಕೊಂಡಿರುತ್ತಾರೆ.
ಸದರಿ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸ್ ತಂಡದಲ್ಲಿ ಪಿ.ಐ. ಶ್ರೀ. ಮುತ್ತರಾಜ್, ಪಿ.ಎಸ್.ಐ. ಶ್ರೀ. ನಾಸೀರ್ ಹುಸೇನ್ ಮತ್ತು ಶ್ರೀ. ರಘುನಾಥ್ ಎಸ್. ವಿ., ಎ.ಎಸ್.ಐ. ಶ್ರೀ. ಎಂ. ಸಿ. ಪ್ರಕಾಶ್ ಮತ್ತು ಸಿಬ್ಬಂದಿಗಳಾದ ಶ್ರೀ. ವಿನಾಯಕ ಮತ್ತು ಶ್ರೀ. ಅನ್ವರ್ ಪಾಷಾ ರವರು ಕಾರ್ಯನಿರ್ವಹಿಸಿರುತ್ತಾರೆ.
ಸಾರ್ವಜನಿಕರು ಇಂತಹ ವಂಚನೆಗಳ ಜಾಲಕ್ಕೆ ಬೀಳದೇ ಎಚ್ಚರ ವಹಿಸಲು ತಿಳಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…