ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ ಸಮಸ್ಯೆ ಇದ್ದಂತಹ ಮಹಿಳೆ ಜಾಹಿರಾತಿನಲ್ಲಿದ್ದ ಫೋನ್ ನಂಬರ್ ಗಳಿಗೆ ಕರೆ ಮಾಡಿ ಸಮಸ್ಯೆ ಸರಿ ಮಾಡಿಕೊಡಿ ಎಂದು ಕೇಳಿಕೊಂಡಾಗ, ನಿಮ್ಮ ಹೆಸರಿನಲ್ಲಿ ಪೂಜೆ ಮಾಡುತ್ತೇನೆ ರೂ. 7,000.00 ಹಣ ಖರ್ಚಾಗುತ್ತೆ ಎಂದು ಹೇಳಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು, ಪುನಃ ಬೇರೆ ಬೇರೆ ಪೂಜೆ ಮಾಡಬೇಕು ಸಮಸ್ಯೆ ಸರಿ ಆಗುತ್ತೆ ಎಂದು ಹಂತ ಹಂತವಾಗಿ ಒಟ್ಟು ರೂ. 1,16,001.00 ಹಣ ವರ್ಗಾವಣೆ ಮಾಡಿಸಿಕೊಂಡು, ಇನ್ನು ಹಲವು ಸಮಸ್ಯೆ ಗಳಿವೆ ಎಂದು ಹೇಳಿ ಪೂಜೆ ಖರ್ಚಿಗೆ ಹಣ ಕಳುಹಿಸಿ ಎಂದು ಹೇಳಿದಾಗ ಮಹಿಳೆ ಅನುಮಾನಗೊಂಡು ಚಿಕ್ಕಮಗಳೂರು ಜಿಲ್ಲಾ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿದ್ದು.
ಮೇಲ್ಕಂಡಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್ನಲ್ಲಿ ಪರಿಹರಿಸಲಾಗುವುದೆಂದು ನಂಬಿಸಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಆತನಿಂದ ರೂ. 87,500.00 ನಗದು, ಒಂದು ಮೊಬೈಲ್ ಫೋನ್ ಮತ್ತು ಎರಡು ಎಟಿಎಂ ಕಾರ್ಡ್ಗಳನ್ನು ವಶಪಡಿಸಿಕೊಂಡಿರುತ್ತಾರೆ.
ಸದರಿ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸ್ ತಂಡದಲ್ಲಿ ಪಿ.ಐ. ಶ್ರೀ. ಮುತ್ತರಾಜ್, ಪಿ.ಎಸ್.ಐ. ಶ್ರೀ. ನಾಸೀರ್ ಹುಸೇನ್ ಮತ್ತು ಶ್ರೀ. ರಘುನಾಥ್ ಎಸ್. ವಿ., ಎ.ಎಸ್.ಐ. ಶ್ರೀ. ಎಂ. ಸಿ. ಪ್ರಕಾಶ್ ಮತ್ತು ಸಿಬ್ಬಂದಿಗಳಾದ ಶ್ರೀ. ವಿನಾಯಕ ಮತ್ತು ಶ್ರೀ. ಅನ್ವರ್ ಪಾಷಾ ರವರು ಕಾರ್ಯನಿರ್ವಹಿಸಿರುತ್ತಾರೆ.
ಸಾರ್ವಜನಿಕರು ಇಂತಹ ವಂಚನೆಗಳ ಜಾಲಕ್ಕೆ ಬೀಳದೇ ಎಚ್ಚರ ವಹಿಸಲು ತಿಳಿಸಲಾಗಿದೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…