Latest

ಹುಬ್ಬಳ್ಳಿ ಧಾರವಾಡ ಅವಳಿ ನಗರದ 45 ಜನರ ಗಡಿಪಾರು ಮಾಡಿದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್.

ವಿವಿಧ ಪ್ರಕರಣಗಳಲ್ಲಿ ಪಾಲ್ಗೊಂಡ ಹುಬ್ಬಳ್ಳಿ ಧಾರವಾಡ ನಗರದ 45 ಜನರನ್ನು ಆರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ರವರು ಹೇಳಿದರು. 8 ಕೊಲೆ, 12 ಕೊಲೆಗೆ ಪ್ರಯತ್ನ, 3 ಸುಲಿಗೆ, 1 ಮನೆಗಳ್ಳತನ, 1 ಮಾನಭಂಗ, 1 ಅಪಹರಣ, 9 ಎನ್ ಡಿ ಪಿ ಎಸ್ ಕಾಯ್ದೆ, 1 ಅಬಕಾರಿ ಕಾಯ್ದೆ, 6 ಓಸಿ ಮಟ್ಕಾ/ಕ್ರಿಕೆಟ್ ಬೆಟ್ಟಿಂಗ್ ಜೂಜಾಟ, 1 ಹಲ್ಲೆ, 2 ದೊಂಬಿ ಪ್ರಕರಣಗಳಲ್ಲಿ ಪಾಲ್ಗೊಂಡ ಒಟ್ಟು 45 ಜನರನ್ನು 1996, 55 ಕಾಯ್ದೆಯ ಅಡಿ ಗಡಿಪಾರು ಮಾಡಲಾಗಿದೆ ಎಂದರು.
ಸಾಮಾನ್ಯವಾಗಿ ಚುನಾವಣಾ ಗಲಭೆಗಳಂತ ಪ್ರಕರಣ ನಡೆದಾಗ ಗಡಿಪಾರು ಮಾಡಲಾಗುತ್ತಿತ್ತು. ಈಗ ಅವಳ ನಗರದಲ್ಲಿ ಕಾನೂನು ವ್ಯವಸ್ಥೆ ಹಾಗೂ ಅಪರಾಧ ತಡೆಯುವ ಉದ್ದೇಶದಿಂದ ಮಾಡಲಾಗುತ್ತಿದೆ. ಆದ್ದರಿಂದ ಗಡಿಪಾರು ಮಾಡುವ ಮೂಲಕ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
45 ಅಪರಾಧಿಗಳನ್ನು ಬೀದರ್, ಯಾದಗಿರಿ, ಕಲಬುರಗಿ, ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಗಳಿಗೆ ಗಡಿಪಾರು ಮಾಡಲಾಗಿದೆ. ಗಡಿಪಾರು ಆದಂತಹ ಅಪರಾಧಿಗಳು ಜಿಲ್ಲೆ ನಿಗದಿಪಡಿಸಿದ್ದ ಠಾಣೆಯಲ್ಲಿ ವರದಿ ಮಾಡಿಕೊಳ್ಳಬೇಕು. ಆದೇಶ ಉಲ್ಲಂಘಿಸಿ ಮತ್ತೆ ನಗರಕ್ಕೆ ಬಂದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಇನ್ನು ಹಲವು ಅಪರಾಧಿಗಳು ನಾಪತ್ತೆಯಾಗಿದ್ದು, ಅವರಿಗಾಗಿಯೂ ಶೋಧ ನಡೆಸಲಾಗುತ್ತಿದೆ.
ಅಷ್ಟೇ ಅಲ್ಲದೆ ಗೂಂಡಾ ಕಾಯ್ದೆ ಹಾಕಲು ಸಹ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಠಾಣಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಸೇರಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತರಾದ, ಸಂಚಾರ ಮತ್ತು ಅಪರಾಧ ವಿಭಾಗದ ರವೀಶ್ ಸಿ. ಆರ್. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಮಹಾನಿಂಗ ನಂದಗಾಂವಿ, ಸಹಾಯಕ ಪೊಲೀಸ್ ಆಯುಕ್ತರಾದ ಪ್ರಶಾಂತ್ ಸಿದ್ದನಗೌಡರ್, ವಿಜಯಕುಮಾರ್ ತಳವಾರ್, ಉಮೇಶ್ ಚಿಕ್ಕಮಠ, ಶಿವಪ್ರಕಾಶ್ ನಾಯಕ್ ಹಾಗೂ ಪೊಲೀಸ್ ಇನ್ಸಪೆಕ್ಟರ್ ಗಳು ಉಪಸ್ಥಿತರಿದ್ದರು.
ವರದಿ: ಶಿವರಾಜ್ ಪಿ.ಆರ್.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago