Latest

ಹುಬ್ಬಳ್ಳಿ ಧಾರವಾಡ ಅವಳಿ ನಗರದ 45 ಜನರ ಗಡಿಪಾರು ಮಾಡಿದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್.

ವಿವಿಧ ಪ್ರಕರಣಗಳಲ್ಲಿ ಪಾಲ್ಗೊಂಡ ಹುಬ್ಬಳ್ಳಿ ಧಾರವಾಡ ನಗರದ 45 ಜನರನ್ನು ಆರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ರವರು ಹೇಳಿದರು. 8 ಕೊಲೆ, 12 ಕೊಲೆಗೆ ಪ್ರಯತ್ನ, 3 ಸುಲಿಗೆ, 1 ಮನೆಗಳ್ಳತನ, 1 ಮಾನಭಂಗ, 1 ಅಪಹರಣ, 9 ಎನ್ ಡಿ ಪಿ ಎಸ್ ಕಾಯ್ದೆ, 1 ಅಬಕಾರಿ ಕಾಯ್ದೆ, 6 ಓಸಿ ಮಟ್ಕಾ/ಕ್ರಿಕೆಟ್ ಬೆಟ್ಟಿಂಗ್ ಜೂಜಾಟ, 1 ಹಲ್ಲೆ, 2 ದೊಂಬಿ ಪ್ರಕರಣಗಳಲ್ಲಿ ಪಾಲ್ಗೊಂಡ ಒಟ್ಟು 45 ಜನರನ್ನು 1996, 55 ಕಾಯ್ದೆಯ ಅಡಿ ಗಡಿಪಾರು ಮಾಡಲಾಗಿದೆ ಎಂದರು.
ಸಾಮಾನ್ಯವಾಗಿ ಚುನಾವಣಾ ಗಲಭೆಗಳಂತ ಪ್ರಕರಣ ನಡೆದಾಗ ಗಡಿಪಾರು ಮಾಡಲಾಗುತ್ತಿತ್ತು. ಈಗ ಅವಳ ನಗರದಲ್ಲಿ ಕಾನೂನು ವ್ಯವಸ್ಥೆ ಹಾಗೂ ಅಪರಾಧ ತಡೆಯುವ ಉದ್ದೇಶದಿಂದ ಮಾಡಲಾಗುತ್ತಿದೆ. ಆದ್ದರಿಂದ ಗಡಿಪಾರು ಮಾಡುವ ಮೂಲಕ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
45 ಅಪರಾಧಿಗಳನ್ನು ಬೀದರ್, ಯಾದಗಿರಿ, ಕಲಬುರಗಿ, ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಗಳಿಗೆ ಗಡಿಪಾರು ಮಾಡಲಾಗಿದೆ. ಗಡಿಪಾರು ಆದಂತಹ ಅಪರಾಧಿಗಳು ಜಿಲ್ಲೆ ನಿಗದಿಪಡಿಸಿದ್ದ ಠಾಣೆಯಲ್ಲಿ ವರದಿ ಮಾಡಿಕೊಳ್ಳಬೇಕು. ಆದೇಶ ಉಲ್ಲಂಘಿಸಿ ಮತ್ತೆ ನಗರಕ್ಕೆ ಬಂದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಇನ್ನು ಹಲವು ಅಪರಾಧಿಗಳು ನಾಪತ್ತೆಯಾಗಿದ್ದು, ಅವರಿಗಾಗಿಯೂ ಶೋಧ ನಡೆಸಲಾಗುತ್ತಿದೆ.
ಅಷ್ಟೇ ಅಲ್ಲದೆ ಗೂಂಡಾ ಕಾಯ್ದೆ ಹಾಕಲು ಸಹ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಠಾಣಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಸೇರಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತರಾದ, ಸಂಚಾರ ಮತ್ತು ಅಪರಾಧ ವಿಭಾಗದ ರವೀಶ್ ಸಿ. ಆರ್. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಮಹಾನಿಂಗ ನಂದಗಾಂವಿ, ಸಹಾಯಕ ಪೊಲೀಸ್ ಆಯುಕ್ತರಾದ ಪ್ರಶಾಂತ್ ಸಿದ್ದನಗೌಡರ್, ವಿಜಯಕುಮಾರ್ ತಳವಾರ್, ಉಮೇಶ್ ಚಿಕ್ಕಮಠ, ಶಿವಪ್ರಕಾಶ್ ನಾಯಕ್ ಹಾಗೂ ಪೊಲೀಸ್ ಇನ್ಸಪೆಕ್ಟರ್ ಗಳು ಉಪಸ್ಥಿತರಿದ್ದರು.
ವರದಿ: ಶಿವರಾಜ್ ಪಿ.ಆರ್.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

3 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

10 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

10 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago