ಬೆಂಗಳೂರು: ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಅರುಣ್ ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯು ಯುವತಿಯನ್ನು ಲೈಂಗಿಕವಾಗಿ ಶೋಷಿಸಿ, ಅದರ ವಿಡಿಯೋ ಚಿತ್ರೀಕರಣ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಪೊಲೀಸರಿಬ್ಬರನ್ನು ಬಂಧಿಸಲಾಗಿದೆ.
ಘಟನೆ ವಿವರ:
ಬಿಟಿಎಂ ಲೇಔಟ್ನ ಓಯೋ ಲಾಡ್ಜ್ಗೆ ಡಿಸೆಂಬರ್ 30ರಂದು ಬಾಲಕಿಯನ್ನು ಕರೆದುಕೊಂಡು ಹೋಗಿ, ಬಲವಂತವಾಗಿ ಬಿಯರ್ ಕುಡಿಸಿ ಅತ್ಯಾಚಾರ ಎಸಗಿದ ಆರೋಪ ಅರುಣ್ ವಿರುದ್ಧ ಕೇಳಿಬಂದಿದೆ. ಇದಲ್ಲದೆ, ಘಟನೆ ಸಂಬಂಧ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಕೂಡ ಯುವತಿ ಆರೋಪಿಸಿದ್ದಾಳೆ.
ಆರೋಪದ ಬೆನ್ನಲ್ಲೇ ಬಂಧನ:
ಆರೋಪಿಯ ವಿರುದ್ಧ ಸಂತ್ರಸ್ತೆ ದೂರು ನೀಡಿದ ನಂತರ, ಬೊಮ್ಮನಹಳ್ಳಿ ಠಾಣೆಯ ಪೊಲೀಸರು ಕ್ರಮ ಕೈಗೊಂಡು, ಕಾನ್ಸ್ಟೆಬಲ್ ಅರುಣ್ ಮತ್ತು ಇನ್ನೊಬ್ಬ ಆರೋಪಿ ವಿಕ್ಕಿ ಎಂಬವನನ್ನು ಬಂಧಿಸಿದ್ದಾರೆ. ವಿಕ್ಕಿಯು ಬಾಲಕಿಯನ್ನು ಪ್ರೀತಿಯ ನೆಪದಲ್ಲಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಈ ಬಗ್ಗೆ ದೂರು ನೀಡಲು ಬಂದುಕೊಂಡಾಗ ಅರುಣ್ ಪರಿಚಯವಾಗಿದ್ದ ಎನ್ನಲಾಗಿದೆ. ಕೇಸ್ ವಿಚಾರದಲ್ಲಿ ಸಹಾಯ ಮಾಡುವ ನೆಪದಲ್ಲಿ ಆರೋಪಿ ಅರುಣ್ ತನ್ನ ಪ್ರಭಾವ ಬಳಸಿ ಯುವತಿಯನ್ನು ಮತ್ತೆ ಶೋಷಿಸಿದ್ದಾನೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತನಿಖೆಯನ್ನು ಮೈಕೊ ಲೇಔಟ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ. ಸಂತ್ರಸ್ತೆಗೆ ನ್ಯಾಯ ದೊರಕಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…