Categories: CrimeLatest

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಅಂತರ ಜಿಲ್ಲಾ ಮಹಿಳಾ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ ಜ್ಯೋತಿ ಅಲಿಯಾಸ್ ಸಂಜನಾ ವೆಂಕಟೇಶ ಪಸಪುಲೇಟ್ (32) ಎಂದು ಗುರುತಿಸಲಾಗಿದೆ.

ಜೂನ್ 3ರಂದು ಚಂದ್ರಗುತ್ತಿಯ ನಿವಾಸಿ ಸವಿತಾ ಆನಂದ ನಾಯ್ಕ ಅವರು ಶಿರಸಿ ಕೇಂದ್ರ ಬಸ್ ನಿಲ್ದಾಣದಲ್ಲಿದ್ದ ವೇಳೆ ಅವರ ಬ್ಯಾಗ್‌ನಲ್ಲಿದ್ದ ಚಿನ್ನಾಭರಣಗಳನ್ನು ಆರೋಪಿತೆ ಕಳವು ಮಾಡಿದ್ದಳು. ಕಳುವಾದ ಆಭರಣಗಳಲ್ಲಿ ಸುಮಾರು 20 ಗ್ರಾಂ ತೂಕದ ಬಂಗಾರದ ಲವಂಗದ ಸರ ಹಾಗೂ 10 ಗ್ರಾಂ ತೂಕದ ಒಂದು ಜೋಡಿ ಬಂಗಾರದ ಕಿವಿಯೊಲೆ ಸೇರಿ ಒಟ್ಟು ಸುಮಾರು 1.59 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿದ್ದವು.

ಪ್ರಕರಣ ದಾಖಲಿಸಿಕೊಂಡ ಶಿರಸಿ ನಗರ ಠಾಣೆ ಪೊಲೀಸರು ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕಾರ್ಯಾಚರಣೆಯನ್ನು ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಸಿಪಿಐ ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ನರಸಿಂಹಲು ಮತ್ತು ನಾರಾಯಣ ರಾಥೋಡ್ ನೇತೃತ್ವದಲ್ಲಿ ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಕೋಟೇಶ ನಾಗರವಳ್ಳಿ, ರಾಮಯ್ಯ ಪೂಜಾರಿ, ಹನುಮಂತ ಮಕಾಪುರ್, ಸದ್ದಾಂ ಹುಸೇನ್, ಚನ್ನಬಸಪ್ಪ ಕೆ., ರಾಜು ಎಂ., ಸುನೀಲ್, ಪ್ರಶಾಂತ್, ಶಂಕರಮ್ಮ, ದೀಪಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

12 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

12 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

12 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

12 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago