ಕುಂದಾಪುರ: ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ ನಡೆದ ಅಂಗಡಿ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಕೃತ್ಯಕ್ಕೆ ಬಳಸಲಾಗಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಬೀಗ ಒಡೆದು ಕಳ್ಳರು ದಾಳಿ ನಡೆಸಿದ್ದರು. ಅಂಗಡಿಯೊಳಗಿದ್ದ ಸುಮಾರು ₹95,000 ಮೌಲ್ಯದ ತಾಮ್ರ, ಹಿತ್ತಾಳೆ, ಅಲ್ಯೂಮಿನಿಯಂ ವಸ್ತುಗಳು ಹಾಗೂ ಇತರ ಸಾಮಗ್ರಿಗಳನ್ನು ಕಳ್ಳತನ ಮಾಡಲಾಗಿತ್ತು.
ಪೊಲೀಸರು ನಡೆಸಿದ ತನಿಖೆಯಲ್ಲಿ ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಮತ್ತು ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಎಂಬವರನ್ನು ಉಡುಪಿಯ ಸಂತೆಕಟ್ಟೆ ಬಳಿ ಶುಕ್ರವಾರ ಬಂಧಿಸಲಾಗಿದೆ.
ಬಂಧಿತರಿಂದ 50 ಕೆಜಿ ತಾಮ್ರದ ಸರಿಗೆ, 34 ಕೆಜಿ ತಾಮ್ರದ ಮತ್ತೊಂದು ಸರಿಗೆ, 64 ಕೆಜಿ ಹಿತ್ತಾಳೆಯ ವಸ್ತು, 20 ಕೆಜಿ ಅಲ್ಯೂಮಿನಿಯಂ ವಸ್ತು, ಫ್ರಿಜ್ ಕಂಪ್ರೆಸರ್, 45 ಹಳೆಯ ಮೊಬೈಲ್ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರು ವಶಕ್ಕೆ ಪಡೆಯಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಕುಂದಾಪುರ ನಗರ ಪೊಲೀಸ್ ಉಪನಿರೀಕ್ಷಕರಾದ ನಂಜಾ ನಾಯ್ಕ್ ಮತ್ತು ಪುಷ್ಪಾ, ಸಂಚಾರ ಎಸ್ಐ ನೂತನ್ ಮತ್ತು ಸಿಬ್ಬಂದಿಗಳಾದ ಮೋಹನ್, ಸಂತೋಷ್, ಪ್ರೀನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್ ಹಾಗೂ ಸತೀಶ್ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಇದೀಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣ ಕುರಿತು ತನಿಖೆ ಮುಂದುವರಿದಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…