ಕುಂದಾಪುರ: ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ ನಡೆದ ಅಂಗಡಿ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಕೃತ್ಯಕ್ಕೆ ಬಳಸಲಾಗಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಬೀಗ ಒಡೆದು ಕಳ್ಳರು ದಾಳಿ ನಡೆಸಿದ್ದರು. ಅಂಗಡಿಯೊಳಗಿದ್ದ ಸುಮಾರು ₹95,000 ಮೌಲ್ಯದ ತಾಮ್ರ, ಹಿತ್ತಾಳೆ, ಅಲ್ಯೂಮಿನಿಯಂ ವಸ್ತುಗಳು ಹಾಗೂ ಇತರ ಸಾಮಗ್ರಿಗಳನ್ನು ಕಳ್ಳತನ ಮಾಡಲಾಗಿತ್ತು.
ಪೊಲೀಸರು ನಡೆಸಿದ ತನಿಖೆಯಲ್ಲಿ ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಮತ್ತು ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಎಂಬವರನ್ನು ಉಡುಪಿಯ ಸಂತೆಕಟ್ಟೆ ಬಳಿ ಶುಕ್ರವಾರ ಬಂಧಿಸಲಾಗಿದೆ.
ಬಂಧಿತರಿಂದ 50 ಕೆಜಿ ತಾಮ್ರದ ಸರಿಗೆ, 34 ಕೆಜಿ ತಾಮ್ರದ ಮತ್ತೊಂದು ಸರಿಗೆ, 64 ಕೆಜಿ ಹಿತ್ತಾಳೆಯ ವಸ್ತು, 20 ಕೆಜಿ ಅಲ್ಯೂಮಿನಿಯಂ ವಸ್ತು, ಫ್ರಿಜ್ ಕಂಪ್ರೆಸರ್, 45 ಹಳೆಯ ಮೊಬೈಲ್ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರು ವಶಕ್ಕೆ ಪಡೆಯಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಕುಂದಾಪುರ ನಗರ ಪೊಲೀಸ್ ಉಪನಿರೀಕ್ಷಕರಾದ ನಂಜಾ ನಾಯ್ಕ್ ಮತ್ತು ಪುಷ್ಪಾ, ಸಂಚಾರ ಎಸ್ಐ ನೂತನ್ ಮತ್ತು ಸಿಬ್ಬಂದಿಗಳಾದ ಮೋಹನ್, ಸಂತೋಷ್, ಪ್ರೀನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್ ಹಾಗೂ ಸತೀಶ್ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಇದೀಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣ ಕುರಿತು ತನಿಖೆ ಮುಂದುವರಿದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…