ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮಾಡಲಾಗುತ್ತಿರುವ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 75 ಪ್ಯಾಕೆಟ್ಗಳಷ್ಟು ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
ಆಹಾರ ಇಲಾಖೆ ಮತ್ತು ಪೊಲೀಸರ ಸಂಯುಕ್ತ ದಾಳಿ
ಅಕ್ರಮ ಅಕ್ಕಿ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ರೋಣ ತಾಲೂಕಿನ ಆಹಾರ ಇಲಾಖೆ ಅಧಿಕಾರಿ ಶಾಂತಾ ಚವಡಿ, ಗಜೇಂದ್ರಗಡ ಠಾಣೆ ಪಿಎಸ್ಐ ಸೋಮನಗೌಡ ಮತ್ತು ಅವರ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ದಾಳಿಯಲ್ಲಿ ಬಾಲಪ್ಪ ಗೌಡ್ರ ಎಂಬುವವರು ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಪತ್ತೆಯಾಗಿದೆ.
ಬಡಜನರ ಪಡಿತರ ಕಾಳ ಸಂತೆಯಲ್ಲಿ ಮಾರಾಟ
ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಬಡವರ ಹೊಟ್ಟೆ ತುಂಬಲು ಪಡಿತರ ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಗಜೇಂದ್ರಗಡ, ಕೊಪ್ಪಳ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಈ ಪಡಿತರ ಧಾನ್ಯಗಳು ಕಾಳಬಜಾರಿನಲ್ಲಿ ಮಾರಾಟವಾಗುತ್ತಿರುವುದು ಗಂಭೀರ ಆತಂಕ ಹುಟ್ಟಿಸಿದೆ.
ಅಕ್ರಮ ಅಕ್ಕಿ ಸಾಗಾಟದ ಮಾಫಿಯಾಗೆ ಬಲೆ ಬೀಸಿದ ಪೊಲೀಸರು
ಈ ಪ್ರಕರಣದಲ್ಲಿ ಇನ್ನಷ್ಟು ಕಿಂಗ್ಪಿನ್ಗಳು ಇದ್ದ ಸಾಧ್ಯತೆ ಇದ್ದು, ಪೊಲೀಸರ ತಂಡ ಈಗ ಅಕ್ರಮ ಪಡಿತರ ಅಕ್ಕಿ ಸಾಗಾಟದ ಜಾಲವನ್ನು ಪತ್ತೆ ಹಚ್ಚಲು ಮುಂದಾಗಿದೆ. ಗಜೇಂದ್ರಗಡದಲ್ಲಿ ಈ ರೀತಿಯ ದಂಧೆ ತಡೆಯಲು ಕಾನೂನು ರಕ್ಷಣಾ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿವೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…