ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮಾಡಲಾಗುತ್ತಿರುವ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 75 ಪ್ಯಾಕೆಟ್ಗಳಷ್ಟು ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
ಆಹಾರ ಇಲಾಖೆ ಮತ್ತು ಪೊಲೀಸರ ಸಂಯುಕ್ತ ದಾಳಿ
ಅಕ್ರಮ ಅಕ್ಕಿ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ರೋಣ ತಾಲೂಕಿನ ಆಹಾರ ಇಲಾಖೆ ಅಧಿಕಾರಿ ಶಾಂತಾ ಚವಡಿ, ಗಜೇಂದ್ರಗಡ ಠಾಣೆ ಪಿಎಸ್ಐ ಸೋಮನಗೌಡ ಮತ್ತು ಅವರ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ದಾಳಿಯಲ್ಲಿ ಬಾಲಪ್ಪ ಗೌಡ್ರ ಎಂಬುವವರು ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಪತ್ತೆಯಾಗಿದೆ.
ಬಡಜನರ ಪಡಿತರ ಕಾಳ ಸಂತೆಯಲ್ಲಿ ಮಾರಾಟ
ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಬಡವರ ಹೊಟ್ಟೆ ತುಂಬಲು ಪಡಿತರ ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಗಜೇಂದ್ರಗಡ, ಕೊಪ್ಪಳ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಈ ಪಡಿತರ ಧಾನ್ಯಗಳು ಕಾಳಬಜಾರಿನಲ್ಲಿ ಮಾರಾಟವಾಗುತ್ತಿರುವುದು ಗಂಭೀರ ಆತಂಕ ಹುಟ್ಟಿಸಿದೆ.
ಅಕ್ರಮ ಅಕ್ಕಿ ಸಾಗಾಟದ ಮಾಫಿಯಾಗೆ ಬಲೆ ಬೀಸಿದ ಪೊಲೀಸರು
ಈ ಪ್ರಕರಣದಲ್ಲಿ ಇನ್ನಷ್ಟು ಕಿಂಗ್ಪಿನ್ಗಳು ಇದ್ದ ಸಾಧ್ಯತೆ ಇದ್ದು, ಪೊಲೀಸರ ತಂಡ ಈಗ ಅಕ್ರಮ ಪಡಿತರ ಅಕ್ಕಿ ಸಾಗಾಟದ ಜಾಲವನ್ನು ಪತ್ತೆ ಹಚ್ಚಲು ಮುಂದಾಗಿದೆ. ಗಜೇಂದ್ರಗಡದಲ್ಲಿ ಈ ರೀತಿಯ ದಂಧೆ ತಡೆಯಲು ಕಾನೂನು ರಕ್ಷಣಾ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿವೆ.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…