ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮಾಡಲಾಗುತ್ತಿರುವ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 75 ಪ್ಯಾಕೆಟ್ಗಳಷ್ಟು ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
ಆಹಾರ ಇಲಾಖೆ ಮತ್ತು ಪೊಲೀಸರ ಸಂಯುಕ್ತ ದಾಳಿ
ಅಕ್ರಮ ಅಕ್ಕಿ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ರೋಣ ತಾಲೂಕಿನ ಆಹಾರ ಇಲಾಖೆ ಅಧಿಕಾರಿ ಶಾಂತಾ ಚವಡಿ, ಗಜೇಂದ್ರಗಡ ಠಾಣೆ ಪಿಎಸ್ಐ ಸೋಮನಗೌಡ ಮತ್ತು ಅವರ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ದಾಳಿಯಲ್ಲಿ ಬಾಲಪ್ಪ ಗೌಡ್ರ ಎಂಬುವವರು ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಪತ್ತೆಯಾಗಿದೆ.
ಬಡಜನರ ಪಡಿತರ ಕಾಳ ಸಂತೆಯಲ್ಲಿ ಮಾರಾಟ
ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಬಡವರ ಹೊಟ್ಟೆ ತುಂಬಲು ಪಡಿತರ ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಗಜೇಂದ್ರಗಡ, ಕೊಪ್ಪಳ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಈ ಪಡಿತರ ಧಾನ್ಯಗಳು ಕಾಳಬಜಾರಿನಲ್ಲಿ ಮಾರಾಟವಾಗುತ್ತಿರುವುದು ಗಂಭೀರ ಆತಂಕ ಹುಟ್ಟಿಸಿದೆ.
ಅಕ್ರಮ ಅಕ್ಕಿ ಸಾಗಾಟದ ಮಾಫಿಯಾಗೆ ಬಲೆ ಬೀಸಿದ ಪೊಲೀಸರು
ಈ ಪ್ರಕರಣದಲ್ಲಿ ಇನ್ನಷ್ಟು ಕಿಂಗ್ಪಿನ್ಗಳು ಇದ್ದ ಸಾಧ್ಯತೆ ಇದ್ದು, ಪೊಲೀಸರ ತಂಡ ಈಗ ಅಕ್ರಮ ಪಡಿತರ ಅಕ್ಕಿ ಸಾಗಾಟದ ಜಾಲವನ್ನು ಪತ್ತೆ ಹಚ್ಚಲು ಮುಂದಾಗಿದೆ. ಗಜೇಂದ್ರಗಡದಲ್ಲಿ ಈ ರೀತಿಯ ದಂಧೆ ತಡೆಯಲು ಕಾನೂನು ರಕ್ಷಣಾ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿವೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…