ಮಾಹಿತಿಯಂತೆ, ಆಗಸ್ಟ್ 2ರ ಬೆಳಿಗ್ಗೆ 11 ಗಂಟೆ ವೇಳೆಗೆ ದೆಹಲಿ–ಜೈಪುರ ಹೆದ್ದಾರಿಯ ರಾಜೀವ್ ಚೌಕ್ ಬಳಿ ಕ್ಯಾಬ್ಗಾಗಿ ಕಾಯುತ್ತಿದ್ದ ಮಾಡೆಲ್ ಒಬ್ಬರ ಮುಂದೆ, ಅನಾಚಾರ ನಡೆದುದು. ಆರೋಪಿಯು ಮೊದಲು ನಿರಂತರವಾಗಿ ಆಕೆಯನ್ನು ಕಣ್ಣಾರೆ ನೋಡುವುದರೊಂದಿಗೆ, ಬಳಿಕ ಪ್ಯಾಂಟ್ ಜಿಪ್ ತೆರೆಯಿ ಹಸ್ತಮೈಥುನಕ್ಕೆ ಮುಂದಾಗಿದ್ದಾನೆ. ಈ ಆಘಾತಕಾರಿ ಘಟನೆಯನ್ನು ಮಾಡೆಲ್ ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದರು.
ಆಮೇಲೆ ಆಕೆಯು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಆರೋಪಿಯನ್ನು ಗುರುತಿಸಿ ಬಂಧಿಸಿದರು. ಬಂಧಿತನನ್ನು ಅಭಿಲಾಷ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಎಂ.ಟೆಕ್ ಪದವಿ ಹೊಂದಿರುವುದಲ್ಲದೆ, ಖಾಸಗಿ ಸಂಸ್ಥೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದಾನೆ.
ಘಟನೆಯ ನಂತರ ತನ್ನ ಮನಸ್ಥಿತಿಯನ್ನು ವಿವರಿಸಿದ ಮಾಡೆಲ್, “ಆ ಕ್ಷಣದಲ್ಲಿ ನಾನು ಭಯ ಮತ್ತು ಆಘಾತದಲ್ಲಿ ಸ್ತಬ್ಧವಾಗಿದ್ದೆ. ಜನರು ನನ್ನಿಂದ ತಕ್ಷಣ ಪ್ರತಿಕ್ರಿಯೆ ನಿರೀಕ್ಷಿಸಿದ್ದರು, ಆದರೆ ಆ ಸಮಯದಲ್ಲಿ ಮಹಿಳೆಯೊಬ್ಬಳ ಮನಸ್ಸಿನಲ್ಲಿ ಏನಾಗುತ್ತಿದೆ ಎಂಬುದನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ನನ್ನ ಮೊದಲ ಆದ್ಯತೆ ಸುರಕ್ಷತೆ” ಎಂದು ಹೇಳಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…