ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಕರ್ತವ್ಯ ನಿರತ ಸರ್ಕಾರಿ ಬಸ್ ಚಾಲಕನ ಮೇಲೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹಲ್ಲೆ ನಡೆಸಿದ ಘಟನೆ ಸ್ಥಳೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸಾರಿಗೆ ನೌಕರರು ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಮಾಹಿತಿಯಂತೆ, ಹರಿಹರ ಘಟಕಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ ಬಳ್ಳಾರಿ ದಿಸೆಯಲ್ಲಿ ಸಂಚರಿಸುತ್ತಿತ್ತು. ಕೊಟ್ಟೂರು–ಕೂಡ್ಲಿಗಿ ಮಾರ್ಗದ ಮಲ್ಲನಾಯಕಹಳ್ಳಿ ಬಳಿ ಬಂದಾಗ ಬಸ್ ಚಾಲಕ ರಾಮಲಿಂಗಪ್ಪ, ಕೂಡ್ಲಿಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಹಾಗೂ ಇನ್ನೊಬ್ಬ ಕಾನ್ಸ್ಟೇಬಲ್ ಸವಾರಿಯಾಗಿದ್ದ ಬೈಕ್ನ್ನು ಹಿಂದಿಕ್ಕಲು ಮುಂದಾದರು. ಈ ವೇಳೆ ಎದುರಿನಿಂದ ಕಾರೊಂದು ಬಂದ ಕಾರಣ, ಚಾಲಕ ಬಸ್ನ್ನು ಎಡಭಾಗಕ್ಕೆ ಎಳೆದುಕೊಂಡರು. ಬಸ್ ಹಿಂಭಾಗ ಬೈಕ್ ಹ್ಯಾಂಡಲ್ಗೆ ಸ್ವಲ್ಪ ತಗುಲಿದರೂ ಯಾವುದೇ ಗಂಭೀರ ಹಾನಿ ಆಗಲಿಲ್ಲ.
ಘಟನೆಯ ಬಳಿಕ ಬಸ್ ಮುಂದುವರಿದರೂ, ಸಿಟ್ಟಿನಿಂದ ಉರಿದ ಮಂಜುನಾಥ್ ಗಜಾಪೂರ ಬಳಿ ಬಸ್ನ್ನು ತಡೆದು ಒಳಗೆ ನುಗ್ಗಿದರು. ಚಾಲಕನನ್ನು ಪ್ರಶ್ನಿಸುವ ಬದಲು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಿನಲ್ಲಿದ್ದ ಚಪ್ಪಲಿಯಿಂದ ಹೊಡೆದಿದ್ದಾರೆಂದು ಆರೋಪಿಸಲಾಗಿದೆ. ಅಲ್ಲದೆ ಚಾಲಕನ ಜೇಬಿನಲ್ಲಿದ್ದ ಮೊಬೈಲ್ ಫೋನ್ ಕಿತ್ತುಕೊಂಡು “ಸ್ಟೇಷನ್ಗೆ ಬಾ” ಎಂದು ಹೇಳಿ ಹೊರಟಿದ್ದಾರೆ.
ರಾಮಲಿಂಗಪ್ಪ ಮೊಬೈಲ್ ಹಿಂತಿರುಗಿಸಬೇಕೆಂದು ವಿನಂತಿಸಿದಾಗ, ಮಂಜುನಾಥ್ ಈ ಬಾರಿ ಕೈಯಲ್ಲಿದ್ದ ಹೆಲ್ಮೆಟ್ನಿಂದ ಹಲ್ಲೆ ನಡೆಸಿದ್ದಾನೆಂದು ಸಾಕ್ಷಿಗಳು ತಿಳಿಸಿದ್ದಾರೆ.
ಘಟನೆಯ ನಂತರ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ವಿರುದ್ಧ ಎಫ್ಐಆರ್ ನೋಂದಾಯಿಸಲಾಗಿದೆ. ವರದಿ ಪ್ರಕಾರ, ಹಲ್ಲೆ ನಡೆದ ಸಂದರ್ಭದಲ್ಲಿ ಮಂಜುನಾಥ್ ಕರ್ತವ್ಯದಲ್ಲಿರಲಿಲ್ಲ. ಕರ್ತವ್ಯ ನಿರತ ಸರ್ಕಾರಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಯನ್ನು ತಕ್ಷಣ ಬಂಧಿಸಿ ಸೇವೆಯಿಂದ ವಜಾ ಮಾಡಲು ಆಗ್ರಹಿಸಿದ್ದಾರೆ.
ಸಾರಿಗೆ ನೌಕರರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, “ಕಾನೂನನ್ನು ರಕ್ಷಿಸಬೇಕಾದವರು ಸ್ವತಃ ಕಾನೂನು ಉಲ್ಲಂಘಿಸಿದರೆ, ಸಾರ್ವಜನಿಕರ ವಿಶ್ವಾಸ ಕುಸಿಯುವುದು ಅನಿವಾರ್ಯ” ಎಂದು ಕಿಡಿಕಾರಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…