Latest

18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ ಕಳ್ಳರನ್ನು ಬೇಟೆಯಾಡಿದ ಪೊಲೀಸರು

ಉತ್ತರಕನ್ನಡ ಜಿಲ್ಲೆಯಲ್ಲಿ ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಹಾಗೂ ಗ್ರಾಮಗಳಲ್ಲಿ ಸಾಕಷ್ಟು ದೇವಸ್ಥಾನಗಳಿವೆ .ನಾವೆಲ್ಲರೂ ಪುಣ್ಯ ಕ್ಷೇತ್ರಗಳಿಗೆ ತೆರಳುವುದು ನಮ್ಮ ಜೀವನದಲ್ಲಿ ಬರುವ ಸಮಸ್ಯೆಗೆ ಪರಿಹಾರ ನೀಡಲು ನೆಮ್ಮದಿಯಿಂದ ಜೀವನ ಸಾಗುವಂತೆ ಮಾಡು ಹೀಗೆ ಮುಂತಾದವುಗಳನ್ನು ಬೇಡಿಕೊಳ್ಳಲು ದೇವಸ್ಥಾನಕ್ಕೆ ಹೋಗುತ್ತೇವೆ .ಆದರೆ ಇದೊಂದು ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ದಿ: 18/11/2022 ರಂದು ಬೆಳಿಗ್ಗೆ ಮಂಚಿಕೆರಿಯಲ್ಲಿ ಮಹಗಜಲಕ್ಷ್ಮೀ ದೇವಸ್ಥಾನದ ಬೀಗವನ್ನು ಮುರಿದು ಯಾರೋ ಕಳ್ಳರು ಒಳಗಿರುವ ಮೂರು ಸಾವಿರ ಕಾಣಿಕೆ ಹಣ ಹಾಗೂ ದೇವರಿಗೆ ಉಪಯೋಗಿಸುವ ಸುಮಾರು ಹತ್ತು ಸಾವಿರ ಬೆಲೆ ಬಾಳುವ ಹಿತ್ತಾಳೆ ಗಂಟೆ ಮತ್ತು ಇಪ್ಪತ್ತು ಸಾವಿರ ಬೆಲೆ ಬಾಳುವ ತಾಮ್ರದ ಕಡಾಯಿ ಹಾಗೂ ಡಿವಿಆರ್. ನನ್ನ ಕದ್ದು ಪರಾರಿಯಾಗಿದ್ದರು . ದೀ 19/11/2022 ರಂದು ಶ್ರೀ ಗಣೇಶ ತಂದೆ ನಾಗೇಶ ಭಂಡಾರ್ಕರ್ ಹತ್ತಿರವಿರುವ ಯಲ್ಲಾಪುರ ಪೋಲೀಸ್ ಠಾಣೆಗೆ ಬೇಟಿ ನೀಡಿ ದೂರನ್ನು ದಾಖಲಿಸಿದ್ದರು. ಇಂತಹದೇ ಇನ್ನೊಂದು ಘಟನೆ ಅದೇ ದಿನ 18/11/2022 ಯಲ್ಲಾಪುರ ತಾಲೂಕುನ ಗುಳ್ಳಪುರದಲ್ಲಿ ನಡೆದಿದೆ ಶಿವವ್ಯಾಘ್ರೆಶ್ವರ ದೇವಸ್ಥಾನದ ಬೀಗವನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಮೀಟಿ ಮುರಿದು ಒಳಗೆ ನುಗ್ಗಿ ಅಲ್ಲಿ ಇರುವ 13500 ಬೆಲೆ ಬಾಳುವ ದೇವರ ಸಾಮಗ್ರಿ ಕಳ್ಳತನ ವಾಗಿರುವ ಬಗ್ಗೆ ಶ್ರೀ ನಾರಾಯಣ ತಂದೆ ಸೀತಾರಾಮ ಭಟ್ ರವರು ಯಲ್ಲಾಪುರ ಪೋಲಿಸ್ ಠಾಣೆಗೆ ತೆರಳಿ ದೂರು ನೀಡಿದ್ದರು.
ಈ ಎರಡು ಘಟನೆಯ ದೂರನ್ನು ತೆಗದುಕೊಂಡು ಶ್ರೀ ವಿಷ್ಣುವರ್ಧನ್ ಐ ಪೀ ಎಸ್ ಮಾನ್ಯ ಪೋಲಿಸ್ ಅದಿಕ್ಷಕರು ಅವರ ಸಲಹೆ ಸೂಚನೆಗಳ ಮೇರೆಗೆ ಆರೋಪಿಗಳಾದ 1)ವಸಂತ ಕುಮಾರ್ ತಂದೆ ಶಿವಪ್ಪ ತಂಬಕದ 40 2) ಸಲಿಮ್ ತಂದೆ ಜಮಲಸಾಬ ವರ್ಷ 28 ಇವರು ಇದು ವರೆಗೆ 18 ದೇವಸ್ಥಾನಗಳ ಕಳ್ಳತನ ಮಾಡಿದ್ದು ಕೃತ್ಯಕ್ಕೆ ಬಳಸಿದ ಮಾರುತಿ ನೆಕ್ಸಾ ಕಂಪನಿಯ ಕಾರು ಹಾಗೂ ಬಜಾಜ್ ಪ್ಲಾಟಿನಂ ದ್ವಿಚಕ್ರ ವಾಹನ ದೇವರ ಒಡವೆ ಬೆಳ್ಳಿ ಹಿತ್ತಾಳೆ ಪಾತ್ರೆಗಳು ಒಟ್ಟು 19,20, 285 ಬೆಲೆಯ ಸಾಮಗ್ರಿಗಳನ್ನು ಜಪ್ತು ಪಡಿಸಿಕೊಂಡಿರುತ್ತಾರೆ.
ಶ್ರೀ ವಿಷ್ಣುವರ್ಧನ್ ಐಪಿಎಸ್ ಮಾನ್ಯ ಪೋಲಿಸ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ .ಶ್ರೀ ಸಿಟಿ ಜಯಕುಮಾರ್ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ ಶ್ರೀ ರವಿ ಡಿ ನಾಯ್ಕ ಮಾನ್ಯ ಪೋಲೀಸ್ ಉಪಆದಿಕ್ಷಕರು ಶಿರಸಿ ಉಪವಿಭಾಗ ಇವರ ಮಾರ್ಗರ್ಶನದಲ್ಲಿ ಶ್ರೀ ಸುರೇಶ ಯಳ್ಳೂರು ಸಿಪಿಐ ಯಲ್ಲಾಪುರ ಪೀ ಎಸ್ ಐ ಶ್ರೀ ಮಂಜುನಾಥ ಗೌಡರ ಅಮಿನಸಬ ಅತ್ತಾರ್ ಶ್ಯಾಮ ಪವಸ್ಕರ್ ಹಾಗೂ ಸಿಬ್ಬಂದಿ ವರ್ಗದವರು ಸೇರಿ ಆರೋಪಿಗಳ ಹೆಡೆಮುರಿಕಟ್ಟಿ ಕಾನೂನು ಕ್ರಮ ಜರುಗಿಸಿದ್ದಾರೆ.

ವರದಿ: ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago