Latest

18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ ಕಳ್ಳರನ್ನು ಬೇಟೆಯಾಡಿದ ಪೊಲೀಸರು

ಉತ್ತರಕನ್ನಡ ಜಿಲ್ಲೆಯಲ್ಲಿ ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಹಾಗೂ ಗ್ರಾಮಗಳಲ್ಲಿ ಸಾಕಷ್ಟು ದೇವಸ್ಥಾನಗಳಿವೆ .ನಾವೆಲ್ಲರೂ ಪುಣ್ಯ ಕ್ಷೇತ್ರಗಳಿಗೆ ತೆರಳುವುದು ನಮ್ಮ ಜೀವನದಲ್ಲಿ ಬರುವ ಸಮಸ್ಯೆಗೆ ಪರಿಹಾರ ನೀಡಲು ನೆಮ್ಮದಿಯಿಂದ ಜೀವನ ಸಾಗುವಂತೆ ಮಾಡು ಹೀಗೆ ಮುಂತಾದವುಗಳನ್ನು ಬೇಡಿಕೊಳ್ಳಲು ದೇವಸ್ಥಾನಕ್ಕೆ ಹೋಗುತ್ತೇವೆ .ಆದರೆ ಇದೊಂದು ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ದಿ: 18/11/2022 ರಂದು ಬೆಳಿಗ್ಗೆ ಮಂಚಿಕೆರಿಯಲ್ಲಿ ಮಹಗಜಲಕ್ಷ್ಮೀ ದೇವಸ್ಥಾನದ ಬೀಗವನ್ನು ಮುರಿದು ಯಾರೋ ಕಳ್ಳರು ಒಳಗಿರುವ ಮೂರು ಸಾವಿರ ಕಾಣಿಕೆ ಹಣ ಹಾಗೂ ದೇವರಿಗೆ ಉಪಯೋಗಿಸುವ ಸುಮಾರು ಹತ್ತು ಸಾವಿರ ಬೆಲೆ ಬಾಳುವ ಹಿತ್ತಾಳೆ ಗಂಟೆ ಮತ್ತು ಇಪ್ಪತ್ತು ಸಾವಿರ ಬೆಲೆ ಬಾಳುವ ತಾಮ್ರದ ಕಡಾಯಿ ಹಾಗೂ ಡಿವಿಆರ್. ನನ್ನ ಕದ್ದು ಪರಾರಿಯಾಗಿದ್ದರು . ದೀ 19/11/2022 ರಂದು ಶ್ರೀ ಗಣೇಶ ತಂದೆ ನಾಗೇಶ ಭಂಡಾರ್ಕರ್ ಹತ್ತಿರವಿರುವ ಯಲ್ಲಾಪುರ ಪೋಲೀಸ್ ಠಾಣೆಗೆ ಬೇಟಿ ನೀಡಿ ದೂರನ್ನು ದಾಖಲಿಸಿದ್ದರು. ಇಂತಹದೇ ಇನ್ನೊಂದು ಘಟನೆ ಅದೇ ದಿನ 18/11/2022 ಯಲ್ಲಾಪುರ ತಾಲೂಕುನ ಗುಳ್ಳಪುರದಲ್ಲಿ ನಡೆದಿದೆ ಶಿವವ್ಯಾಘ್ರೆಶ್ವರ ದೇವಸ್ಥಾನದ ಬೀಗವನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಮೀಟಿ ಮುರಿದು ಒಳಗೆ ನುಗ್ಗಿ ಅಲ್ಲಿ ಇರುವ 13500 ಬೆಲೆ ಬಾಳುವ ದೇವರ ಸಾಮಗ್ರಿ ಕಳ್ಳತನ ವಾಗಿರುವ ಬಗ್ಗೆ ಶ್ರೀ ನಾರಾಯಣ ತಂದೆ ಸೀತಾರಾಮ ಭಟ್ ರವರು ಯಲ್ಲಾಪುರ ಪೋಲಿಸ್ ಠಾಣೆಗೆ ತೆರಳಿ ದೂರು ನೀಡಿದ್ದರು.
ಈ ಎರಡು ಘಟನೆಯ ದೂರನ್ನು ತೆಗದುಕೊಂಡು ಶ್ರೀ ವಿಷ್ಣುವರ್ಧನ್ ಐ ಪೀ ಎಸ್ ಮಾನ್ಯ ಪೋಲಿಸ್ ಅದಿಕ್ಷಕರು ಅವರ ಸಲಹೆ ಸೂಚನೆಗಳ ಮೇರೆಗೆ ಆರೋಪಿಗಳಾದ 1)ವಸಂತ ಕುಮಾರ್ ತಂದೆ ಶಿವಪ್ಪ ತಂಬಕದ 40 2) ಸಲಿಮ್ ತಂದೆ ಜಮಲಸಾಬ ವರ್ಷ 28 ಇವರು ಇದು ವರೆಗೆ 18 ದೇವಸ್ಥಾನಗಳ ಕಳ್ಳತನ ಮಾಡಿದ್ದು ಕೃತ್ಯಕ್ಕೆ ಬಳಸಿದ ಮಾರುತಿ ನೆಕ್ಸಾ ಕಂಪನಿಯ ಕಾರು ಹಾಗೂ ಬಜಾಜ್ ಪ್ಲಾಟಿನಂ ದ್ವಿಚಕ್ರ ವಾಹನ ದೇವರ ಒಡವೆ ಬೆಳ್ಳಿ ಹಿತ್ತಾಳೆ ಪಾತ್ರೆಗಳು ಒಟ್ಟು 19,20, 285 ಬೆಲೆಯ ಸಾಮಗ್ರಿಗಳನ್ನು ಜಪ್ತು ಪಡಿಸಿಕೊಂಡಿರುತ್ತಾರೆ.
ಶ್ರೀ ವಿಷ್ಣುವರ್ಧನ್ ಐಪಿಎಸ್ ಮಾನ್ಯ ಪೋಲಿಸ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ .ಶ್ರೀ ಸಿಟಿ ಜಯಕುಮಾರ್ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ ಶ್ರೀ ರವಿ ಡಿ ನಾಯ್ಕ ಮಾನ್ಯ ಪೋಲೀಸ್ ಉಪಆದಿಕ್ಷಕರು ಶಿರಸಿ ಉಪವಿಭಾಗ ಇವರ ಮಾರ್ಗರ್ಶನದಲ್ಲಿ ಶ್ರೀ ಸುರೇಶ ಯಳ್ಳೂರು ಸಿಪಿಐ ಯಲ್ಲಾಪುರ ಪೀ ಎಸ್ ಐ ಶ್ರೀ ಮಂಜುನಾಥ ಗೌಡರ ಅಮಿನಸಬ ಅತ್ತಾರ್ ಶ್ಯಾಮ ಪವಸ್ಕರ್ ಹಾಗೂ ಸಿಬ್ಬಂದಿ ವರ್ಗದವರು ಸೇರಿ ಆರೋಪಿಗಳ ಹೆಡೆಮುರಿಕಟ್ಟಿ ಕಾನೂನು ಕ್ರಮ ಜರುಗಿಸಿದ್ದಾರೆ.

ವರದಿ: ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

16 hours ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

16 hours ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

16 hours ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

16 hours ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago