Categories: CrimeLatest

ಗಂಡನನ್ನು ಬಿಡಲು 25 ಲಕ್ಷ ಕೊಡು, ಇಲ್ಲವೇ ನನ್ನೊಂದಿಗೆ ಮಲಗು ಎಂದಿರುವ ಪೋಲಿ ಪೊಲೀಸ್ ಇನ್ಸ್‌ಪೆಕ್ಟರ್

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಪ್ರಕರಣ ರಾಜ್ಯ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆಯಾದಂತೆ ಪರಿಣಮಿಸಿದ್ದು, ಅಧಿಕಾರ ದುರುಪಯೋಗ ಮತ್ತು ಮಹಿಳೆಯರ ಮೇಲಿನ ಕಿರುಕುಳದ ವಿಚಾರ ಚರ್ಚೆಗೆ ಕಾರಣವಾಗಿದೆ.

ಸಂತ್ರಸ್ತೆಯ ಪತಿ ಸಾಮಾಜಿಕ ಕಾರ್ಯಕರ್ತರಾಗಿದ್ದು, ಇತ್ತೀಚೆಗೆ ಕೆಲವು ಮಹಿಳೆಯರು ಇನ್ಸ್‌ಪೆಕ್ಟರ್ ವಿರುದ್ಧ ನೀಡಿದ ಕಿರುಕುಳದ ದೂರಿನಲ್ಲಿ ಅವರಿಗೆ ಸಹಾಯ ಮಾಡಿದ್ದರು. ಈ ಹಿನ್ನೆಲೆ ತಿಳಿದ ಇನ್ಸ್‌ಪೆಕ್ಟರ್, ಆ ವ್ಯಕ್ತಿಯ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಹಿಂಸೆ ನೀಡಲು ಆರಂಭಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆಗಸ್ಟ್ ತಿಂಗಳಲ್ಲಿ ಮಹಿಳೆಯ ಪತಿಯನ್ನು ಬಂಧಿಸಿದ ಬಳಿಕ, ಬಿಡುಗಡೆಗಾಗಿ ಪತ್ನಿ ಇನ್ಸ್‌ಪೆಕ್ಟರ್ ಅವರನ್ನು ಸಂಪರ್ಕಿಸಿದಾಗ, ಅವರು 25 ಲಕ್ಷ ರೂಪಾಯಿ ಹಣ ನೀಡಬೇಕು ಅಥವಾ ಅಸಭ್ಯ ಬೇಡಿಕೆಗೆ ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ. ಅಲ್ಲದೆ, ತಾನು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ನೀಡಿ ಈ ಸ್ಥಳಕ್ಕೆ ವರ್ಗಾವಣೆಯಾಗಿದ್ದೇನೆ ಎಂದು ಹೇಳಿ, ಹಣ ನೀಡದಿದ್ದರೆ ಪತಿಯ ಮೇಲೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರ್ಥಿಕವಾಗಿ ಅಸಹಾಯಕಳಾದ ಮಹಿಳೆ, ಸಾಧ್ಯವಾದಷ್ಟು 50 ಸಾವಿರ ರೂಪಾಯಿ ನೀಡಿ ಪತಿಯನ್ನು ಸ್ಟೇಷನ್ ಬೇಲ್ ಮೇಲೆ ಬಿಡಿಸಿಕೊಂಡಿದ್ದಾರೆ. ಆದರೆ ನಂತರವೂ ಕಿರುಕುಳ ನಿಲ್ಲದೇ, ಪತಿಯನ್ನು ಹುಡುಕುವ ನೆಪದಲ್ಲಿ ಮಹಿಳೆಯನ್ನು ಮತ್ತೆ ಮತ್ತೆ ಠಾಣೆಗೆ ಬರಲು ಒತ್ತಾಯಿಸಲಾಗುತ್ತಿದೆ ಎಂದು ಅವರು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಇದೇ ರೀತಿಯ ದೂರುಗಳನ್ನು ಇನ್ನೂ ಹಲವಾರು ಮಹಿಳೆಯರು ನೀಡಿದ್ದು, ಕುಟುಂಬ ಕಲಹಗಳ ಪ್ರಕರಣಗಳಲ್ಲಿ ಮಹಿಳೆಯರನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಾರೆ ಎಂಬ ಆರೋಪಗಳು ಕೇಳಿಬಂದಿವೆ.

ಇದಲ್ಲದೆ, ಪತಿ ವಿದೇಶದಲ್ಲಿ ಇರುವ ಒಬ್ಬ ಮಹಿಳೆಯ ಮನೆಗೆ ರಾತ್ರಿ ವೇಳೆ ನುಗ್ಗಿದ ಘಟನೆಗೂ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಿರುವುದಾಗಿ ವರದಿಯಾಗಿದೆ. ಈ ಎಲ್ಲ ಘಟನೆಗಳ ಬಗ್ಗೆ ಪೊಲೀಸ್ ಕಮಿಷನರ್‌ಗೆ ದೂರು ನೀಡಿದರೂ, ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.

ಈ ಪ್ರಕರಣ ಇದೀಗ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago