ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಪ್ರಕರಣ ರಾಜ್ಯ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆಯಾದಂತೆ ಪರಿಣಮಿಸಿದ್ದು, ಅಧಿಕಾರ ದುರುಪಯೋಗ ಮತ್ತು ಮಹಿಳೆಯರ ಮೇಲಿನ ಕಿರುಕುಳದ ವಿಚಾರ ಚರ್ಚೆಗೆ ಕಾರಣವಾಗಿದೆ.
ಸಂತ್ರಸ್ತೆಯ ಪತಿ ಸಾಮಾಜಿಕ ಕಾರ್ಯಕರ್ತರಾಗಿದ್ದು, ಇತ್ತೀಚೆಗೆ ಕೆಲವು ಮಹಿಳೆಯರು ಇನ್ಸ್ಪೆಕ್ಟರ್ ವಿರುದ್ಧ ನೀಡಿದ ಕಿರುಕುಳದ ದೂರಿನಲ್ಲಿ ಅವರಿಗೆ ಸಹಾಯ ಮಾಡಿದ್ದರು. ಈ ಹಿನ್ನೆಲೆ ತಿಳಿದ ಇನ್ಸ್ಪೆಕ್ಟರ್, ಆ ವ್ಯಕ್ತಿಯ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಹಿಂಸೆ ನೀಡಲು ಆರಂಭಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಆಗಸ್ಟ್ ತಿಂಗಳಲ್ಲಿ ಮಹಿಳೆಯ ಪತಿಯನ್ನು ಬಂಧಿಸಿದ ಬಳಿಕ, ಬಿಡುಗಡೆಗಾಗಿ ಪತ್ನಿ ಇನ್ಸ್ಪೆಕ್ಟರ್ ಅವರನ್ನು ಸಂಪರ್ಕಿಸಿದಾಗ, ಅವರು 25 ಲಕ್ಷ ರೂಪಾಯಿ ಹಣ ನೀಡಬೇಕು ಅಥವಾ ಅಸಭ್ಯ ಬೇಡಿಕೆಗೆ ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ. ಅಲ್ಲದೆ, ತಾನು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ನೀಡಿ ಈ ಸ್ಥಳಕ್ಕೆ ವರ್ಗಾವಣೆಯಾಗಿದ್ದೇನೆ ಎಂದು ಹೇಳಿ, ಹಣ ನೀಡದಿದ್ದರೆ ಪತಿಯ ಮೇಲೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆರ್ಥಿಕವಾಗಿ ಅಸಹಾಯಕಳಾದ ಮಹಿಳೆ, ಸಾಧ್ಯವಾದಷ್ಟು 50 ಸಾವಿರ ರೂಪಾಯಿ ನೀಡಿ ಪತಿಯನ್ನು ಸ್ಟೇಷನ್ ಬೇಲ್ ಮೇಲೆ ಬಿಡಿಸಿಕೊಂಡಿದ್ದಾರೆ. ಆದರೆ ನಂತರವೂ ಕಿರುಕುಳ ನಿಲ್ಲದೇ, ಪತಿಯನ್ನು ಹುಡುಕುವ ನೆಪದಲ್ಲಿ ಮಹಿಳೆಯನ್ನು ಮತ್ತೆ ಮತ್ತೆ ಠಾಣೆಗೆ ಬರಲು ಒತ್ತಾಯಿಸಲಾಗುತ್ತಿದೆ ಎಂದು ಅವರು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ಇದೇ ರೀತಿಯ ದೂರುಗಳನ್ನು ಇನ್ನೂ ಹಲವಾರು ಮಹಿಳೆಯರು ನೀಡಿದ್ದು, ಕುಟುಂಬ ಕಲಹಗಳ ಪ್ರಕರಣಗಳಲ್ಲಿ ಮಹಿಳೆಯರನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಾರೆ ಎಂಬ ಆರೋಪಗಳು ಕೇಳಿಬಂದಿವೆ.
ಇದಲ್ಲದೆ, ಪತಿ ವಿದೇಶದಲ್ಲಿ ಇರುವ ಒಬ್ಬ ಮಹಿಳೆಯ ಮನೆಗೆ ರಾತ್ರಿ ವೇಳೆ ನುಗ್ಗಿದ ಘಟನೆಗೂ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಿರುವುದಾಗಿ ವರದಿಯಾಗಿದೆ. ಈ ಎಲ್ಲ ಘಟನೆಗಳ ಬಗ್ಗೆ ಪೊಲೀಸ್ ಕಮಿಷನರ್ಗೆ ದೂರು ನೀಡಿದರೂ, ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.
ಈ ಪ್ರಕರಣ ಇದೀಗ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…