Latest

ತಂದೆಯ ಸಾವಿಗೆ ನ್ಯಾಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ನ ಧರಣಿ: ಹಾರೂಗೇರಿ ಠಾಣೆ ಮುಂದೆ ಭಾರೀ ಹೈಡ್ರಾಮ

ಬೆಳಗಾವಿ: ಹಾರೂಗೇರಿ ಪೊಲೀಸ್ ಠಾಣೆ ಎದುರು ಭಾರೀ ನಾಟಕೀಯ ಘಟನೆ ನಡೆದಿದ್ದು, ನ್ಯಾಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ ಸದಲಗಿ, ತಮ್ಮ ತಂದೆ ಅಣ್ಣಪ್ಪ ಸದಲಗಿಯ ಅಪಮೃತ್ಯುವಿಗೆ ಹಾರೂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮಾಳಪ್ಪ ಪೂಜಾರಿ ಹೊಣೆಗಾರ ಎಂದು ಆರೋಪಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಜನವರಿ 10ರಂದು, ರಾಯಬಾಗ ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ಇನ್ಸ್‌ಪೆಕ್ಟರ್ ಅಶೋಕ ಅವರ ತಂದೆ ಅಣ್ಣಪ್ಪ ಅವರ ಜಮೀನಿಗೆ ಬಾಬು ನಡೋಣಿ, ಪ್ರತಾಪ್ ಹರೋಲಿ, ವಸಂತ ಚೌಗಲಾ ಸೇರಿ ಕೆಲವು ವ್ಯಕ್ತಿಗಳು ಅಕ್ರಮ ಪ್ರವೇಶ ಮಾಡಿದರು. ಈ ಕುರಿತು ಅಣ್ಣಪ್ಪ ಅವರು ಪ್ರಶ್ನಿಸಿದಾಗ, ಈ ತಂಡ ಅವರ ಮೇಲೆ ಹಲ್ಲೆ ನಡೆಸಿದ ಆರೋಪವಿದೆ.

ಘಟನೆ ವೇಳೆ ಅಣ್ಣಪ್ಪ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರ ಸಹಾಯಕ್ಕಾಗಿ ಮನವಿ ಮಾಡಿಕೊಂಡರು. ಕೂಡಲೇ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಣ್ಣಪ್ಪ ಸೇರಿದಂತೆ ಹಲ್ಲೆ ನಡೆಸಿದವರನ್ನೂ ಠಾಣೆಗೆ ಕರೆದೊಯ್ದರು.

ಪೋಲೀಸರ ಅಮಾನವೀಯ ವರ್ತನೆ?

ಅಣ್ಣಪ್ಪ ಅವರನ್ನು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಇಡೀ ದಿನ ಇರಿಸಿ ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಅವರ ಆರೋಗ್ಯ ಕ್ಷೀಣಿಸಿ, ಶುಗರ್ ಮತ್ತು ಬಿಪಿ ಸಮಸ್ಯೆ ತೀವ್ರಗೊಂಡಿತು. ಬಳಿಕ, ಕುಟುಂಬದವರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಇಂದು (ಶನಿವಾರ) ಅಣ್ಣಪ್ಪ ಸದಲಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಈ ಬೆಳವಣಿಗೆಗೆ ಗಂಭೀರ ಆಕ್ರೋಶ ವ್ಯಕ್ತಪಡಿಸಿರುವ ಇನ್ಸ್‌ಪೆಕ್ಟರ್ ಅಶೋಕ್, ಹಾರೂಗೇರಿ ಪೊಲೀಸ್ ಠಾಣೆ ಎದುರು ತಂದೆಯ ಶವವಿಟ್ಟು ಧರಣಿ ನಡೆಸಿದ್ದಾರೆ.

ಪಿಎಸ್‌ಐ ವಿರುದ್ಧ ಎಫ್‌ಐಆರ್ ಬೇಡಿಕೆ

ತಂದೆಯ ಸಾವಿಗೆ ಜವಾಬ್ದಾರನಾಗಿರುವ ಹಾರೂಗೇರಿ ಪಿಎಸ್‌ಐ ಮಾಳಪ್ಪ ಪೂಜಾರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅಶೋಕ್ ಒತ್ತಾಯಿಸಿದ್ದಾರೆ. ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಸ್ಥಳಕ್ಕೆ ಆಗಮಿಸುವಂತೆ ಅವರು ಪಟ್ಟು ಹಿಡಿದಿದ್ದಾರೆ.

ಈ ಪ್ರಕರಣವು ಪೊಲೀಸ್ ವ್ಯವಸ್ಥೆಯ ನಿರ್ಲಕ್ಷ್ಯತೆ ಮತ್ತು ಸತ್ಯಾಸತ್ಯತೆ ಕುರಿತು ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಹೆಚ್ಚಿನ ತನಿಖೆಯಿಂದ ಸತ್ಯ ಬೆಳಕಿಗೆ ಬರಬೇಕಾಗಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

13 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago