Latest

ತಂದೆಯ ಸಾವಿಗೆ ನ್ಯಾಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ನ ಧರಣಿ: ಹಾರೂಗೇರಿ ಠಾಣೆ ಮುಂದೆ ಭಾರೀ ಹೈಡ್ರಾಮ

ಬೆಳಗಾವಿ: ಹಾರೂಗೇರಿ ಪೊಲೀಸ್ ಠಾಣೆ ಎದುರು ಭಾರೀ ನಾಟಕೀಯ ಘಟನೆ ನಡೆದಿದ್ದು, ನ್ಯಾಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ ಸದಲಗಿ, ತಮ್ಮ ತಂದೆ ಅಣ್ಣಪ್ಪ ಸದಲಗಿಯ ಅಪಮೃತ್ಯುವಿಗೆ ಹಾರೂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮಾಳಪ್ಪ ಪೂಜಾರಿ ಹೊಣೆಗಾರ ಎಂದು ಆರೋಪಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಜನವರಿ 10ರಂದು, ರಾಯಬಾಗ ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ಇನ್ಸ್‌ಪೆಕ್ಟರ್ ಅಶೋಕ ಅವರ ತಂದೆ ಅಣ್ಣಪ್ಪ ಅವರ ಜಮೀನಿಗೆ ಬಾಬು ನಡೋಣಿ, ಪ್ರತಾಪ್ ಹರೋಲಿ, ವಸಂತ ಚೌಗಲಾ ಸೇರಿ ಕೆಲವು ವ್ಯಕ್ತಿಗಳು ಅಕ್ರಮ ಪ್ರವೇಶ ಮಾಡಿದರು. ಈ ಕುರಿತು ಅಣ್ಣಪ್ಪ ಅವರು ಪ್ರಶ್ನಿಸಿದಾಗ, ಈ ತಂಡ ಅವರ ಮೇಲೆ ಹಲ್ಲೆ ನಡೆಸಿದ ಆರೋಪವಿದೆ.

ಘಟನೆ ವೇಳೆ ಅಣ್ಣಪ್ಪ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರ ಸಹಾಯಕ್ಕಾಗಿ ಮನವಿ ಮಾಡಿಕೊಂಡರು. ಕೂಡಲೇ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಣ್ಣಪ್ಪ ಸೇರಿದಂತೆ ಹಲ್ಲೆ ನಡೆಸಿದವರನ್ನೂ ಠಾಣೆಗೆ ಕರೆದೊಯ್ದರು.

ಪೋಲೀಸರ ಅಮಾನವೀಯ ವರ್ತನೆ?

ಅಣ್ಣಪ್ಪ ಅವರನ್ನು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಇಡೀ ದಿನ ಇರಿಸಿ ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಅವರ ಆರೋಗ್ಯ ಕ್ಷೀಣಿಸಿ, ಶುಗರ್ ಮತ್ತು ಬಿಪಿ ಸಮಸ್ಯೆ ತೀವ್ರಗೊಂಡಿತು. ಬಳಿಕ, ಕುಟುಂಬದವರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಇಂದು (ಶನಿವಾರ) ಅಣ್ಣಪ್ಪ ಸದಲಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಈ ಬೆಳವಣಿಗೆಗೆ ಗಂಭೀರ ಆಕ್ರೋಶ ವ್ಯಕ್ತಪಡಿಸಿರುವ ಇನ್ಸ್‌ಪೆಕ್ಟರ್ ಅಶೋಕ್, ಹಾರೂಗೇರಿ ಪೊಲೀಸ್ ಠಾಣೆ ಎದುರು ತಂದೆಯ ಶವವಿಟ್ಟು ಧರಣಿ ನಡೆಸಿದ್ದಾರೆ.

ಪಿಎಸ್‌ಐ ವಿರುದ್ಧ ಎಫ್‌ಐಆರ್ ಬೇಡಿಕೆ

ತಂದೆಯ ಸಾವಿಗೆ ಜವಾಬ್ದಾರನಾಗಿರುವ ಹಾರೂಗೇರಿ ಪಿಎಸ್‌ಐ ಮಾಳಪ್ಪ ಪೂಜಾರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅಶೋಕ್ ಒತ್ತಾಯಿಸಿದ್ದಾರೆ. ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಸ್ಥಳಕ್ಕೆ ಆಗಮಿಸುವಂತೆ ಅವರು ಪಟ್ಟು ಹಿಡಿದಿದ್ದಾರೆ.

ಈ ಪ್ರಕರಣವು ಪೊಲೀಸ್ ವ್ಯವಸ್ಥೆಯ ನಿರ್ಲಕ್ಷ್ಯತೆ ಮತ್ತು ಸತ್ಯಾಸತ್ಯತೆ ಕುರಿತು ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಹೆಚ್ಚಿನ ತನಿಖೆಯಿಂದ ಸತ್ಯ ಬೆಳಕಿಗೆ ಬರಬೇಕಾಗಿದೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago