ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ವ್ಯವಸ್ಥೆಗೆ ಗಂಭೀರ ಧಕ್ಕೆ ನೀಡುವ ಘಟನೆ ಬೆಳಕಿಗೆ ಬಂದಿದೆ. ಅತ್ತಿಬೆಲೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಅಫ್ರೋಜ್ ಖಾನ್ ಮೇಲೆ ಗೋವಿಂದರಾಜನಗರ ಠಾಣೆಯ ಪೊಲೀಸರು ಭೀಕರ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಘಟನೆ ವಿವರಿಸಿದರೆ, ಅಫ್ರೋಜ್ ಖಾನ್ ಪುತ್ರ ಅಲಿ ಅಜ್ಗರ್ ಖಾನ್ ಬೈಕ್ನಲ್ಲಿ ಬೇಕರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಅತ್ತಿಬೆಲೆ ಟೋಲ್ ಗೇಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಗೋವಿಂದರಾಜನಗರ ಪೊಲೀಸರು ಆತನನ್ನು ನಿಲ್ಲಿಸಿ ದಾಖಲೆ ಪರಿಶೀಲನೆ ಆರಂಭಿಸಿದರು. ಈ ವೇಳೆ ಅಜ್ಗರ್ ಖಾನ್ ಮೇಲೆ ಹಲ್ಲೆ ನಡೆಸಲಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಫ್ರೋಜ್ ಖಾನ್ ತನ್ನ ಮಗನಿಗೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದಾಗ, ತಾನೇ ಪೊಲೀಸ್ ಎಂದು ಪರಿಚಯಿಸಿಕೊಂಡರೂ, ಅಧಿಕಾರಿಗಳು ಕೇಳದೆ ತೀವ್ರವಾಗಿ ನಿಂದಿಸಿ ಹಲ್ಲೆ ನಡೆಸಿದರು ಎನ್ನಲಾಗಿದೆ.
ಅಫ್ರೋಜ್ ಖಾನ್ ನೀಡಿದ ದೂರಿನಂತೆ, ಇನ್ಸ್ಪೆಕ್ಟರ್ ಗುರು ಪ್ರಸಾದ್, ಎಎಸ್ಐ ಹನುಮಗೌಡ ಹಾಗೂ ಕಾನ್ಸ್ಟೇಬಲ್ಗಳು ಅರ್ಜುನ ಕಾಂಬಳೆ, ಪ್ರಸನ್ನ ಮತ್ತು ಸುರೇಶ್ ಸೇರಿ ಈ ದೌರ್ಜನ್ಯದಲ್ಲಿ ಭಾಗಿಯಾಗಿದ್ದಾರೆ. ಅಫ್ರೋಜ್ ಖಾನ್ ಅವರನ್ನು ಅಪಹರಿಸಿ ವಿಭಿನ್ನ ಸ್ಥಳಕ್ಕೆ ತೆಗೆದುಕೊಂಡು ಹಲ್ಲೆ ನಡೆಸಿರುವ ಆರೋಪವೂ ಇದೆ. ಈ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸಾಕ್ಷ್ಯಗಳಾಗಿ ಕಾಣಿಸುತ್ತಿವೆ.
ಇದೇ ಬಗ್ಗೆ ಅಫ್ರೋಜ್ ಖಾನ್ ಅವರು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುವುದಾಗಿ ತಿಳಿದುಬಂದಿದ್ದು, ಆದರೆ ಠಾಣೆ ಪೊಲೀಸರು ದೂರು ಸ್ವೀಕರಿಸಲು ನಿರಾಸಕ್ತಿ ತೋರಿರುವುದು ಮತ್ತೊಂದು ಪ್ರಶ್ನೆಯಾಗಿದೆ.
ಈ ಘಟನೆಯು ಪೊಲೀಸ್ ವ್ಯವಸ್ಥೆಯ ವಿಶ್ವಾಸಾರ್ಹತೆಯ ಮೇಲೆ ಗಂಭೀರ ಅಡುಗೆ ತಂದಿದ್ದು, ಪೊಲೀಸರು ಕಾನೂನುಗೆ ಅಧೀನರಾಗಬೇಕೆಂಬ ಪ್ರಶ್ನೆ ಮತ್ತೆ ಒತ್ತಿಬರುತ್ತಿದೆ. ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿದ್ದು, ನ್ಯಾಯ ಹಾಗೂ ನ್ಯಾಯಾಂಗ ಕ್ರಮದ ನಿರೀಕ್ಷೆಯಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…