ಮೈಸೂರು ಜಿಲ್ಲೆ, ಪಿರಿಯಾಪಟ್ಟಣ: ಜನರ ರಕ್ಷಣೆಗಾಗಿ ನಿಯೋಜಿತ ಪೊಲೀಸ್ ಸಿಬ್ಬಂದಿಯೊಬ್ಬನೇ ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿರುವ ಶೋಕಾಂತಿಕ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಈ ಸಂಗತಿಗೆ ಸ್ಥಳೀಯರು ಮಾತ್ರವಲ್ಲದೆ ಪೊಲೀಸ್ ಇಲಾಖೆಯನ್ನೂ ನಡುಗಿಸಿಕೊಂಡಿದೆ.
ಕಂಪಲಾಪುರದ ನಿವಾಸಿ ದಿನೇಶ್ ಕುಮಾರ್ ಎಂಬುವವರನ್ನು ಟಾರ್ಗೆಟ್ ಮಾಡಿಕೊಂಡು, ಹನಿಟ್ರ್ಯಾಪ್ ಮೂಲಕ ಹಣ ಸುಲಿಗೆ ಮಾಡಲು ಆರೋಪಿಗಳು ಸಂಘಟಿತ ರೂಪದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಯುವತಿಯ ಸಹಾಯದಿಂದ ಸ್ನೇಹ ಸ್ಥಾಪಿಸಿ, ಬಳಿಕ ಆತನ ಗೌಪ್ಯತೆ ದುರ್ಬಳಕೆ ಮಾಡಿ ಹಣ ಬೇಡಿಕೆ ಇಟ್ಟಿದ್ದಾರೆ.
ಆಘಾತಕಾರಿ ಸಂಗತಿಯೆಂದರೆ, ಈ ಕೃತ್ಯದಲ್ಲಿ ಪಿರಿಯಾಪಟ್ಟಣ ಠಾಣೆಯ ಶಿವಣ್ಣ ಎಂಬ ಪೊಲೀಸ್ ಸಿಬ್ಬಂದಿಯೂ ಭಾಗಿಯಾಗಿರುವುದು. ಈತನೊಂದಿಗೆ ಎ1 ಮೂರ್ತಿ ಮತ್ತು ಇನ್ನೂ ಮೂವರು ಆರೋಪಿಗಳಿವೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ಪಿರಿಯಾಪಟ್ಟಣ ಠಾಣೆಯ ಇನ್ಸ್ಪೆಕ್ಟರ್ ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಪ್ರಕರಣವು ಪೊಲೀಸ್ ಇಲಾಖೆಯ ನೈತಿಕತೆ ಹಾಗೂ ಶಿಸ್ತುಬದ್ಧತೆಯ ಮೇಲೆ ಗಂಭೀರ ಪ್ರಶ್ನೆ ಎಬ್ಬಿಸಿದ್ದು, ಸಾರ್ವಜನಿಕರ ನಂಬಿಕೆ ಮೇಲೆ ಬಿರುಕು ಬಿಟ್ಟಿದೆ. “ಪೊಲೀಸರೇ ತಪ್ಪುಮಾರ್ಗ ಹಿಡಿದರೆ, ಕಾನೂನು ವ್ಯವಸ್ಥೆ ಎಲ್ಲಿ ನಿಲ್ಲುತ್ತದೆ?” ಎಂಬ ಆತಂಕ ಜನರಲ್ಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಘಟನೆಯ ಹಿಂದಿನ ನಿಜವಾದ ಹಿನ್ನೆಲೆ ಬಹುಷಃ ತನಿಖೆಯಲ್ಲಿ ಬೆಳಕಿಗೆ ಬರಲಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…