ಚಾಮರಾಜನಗರ, ಜುಲೈ 28: ಅಧಿಕಾರದ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಯೊಬ್ಬರ ಬಳಿ ಹಣೆ ಹಾಕಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ ಘಟನೆ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದೆ. ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಅಯ್ಯನಗೌಡ ಸೇರಿದಂತೆ ಆರು ಮಂದಿ ಪೊಲೀಸರ ವಿರುದ್ಧ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತಮಿಳುನಾಡು ಮೂಲದ ಉದ್ಯಮಿ ಸಚ್ಚಿದಾನಂದ ಮೂರ್ತಿ ಎಂಬುವವರು ಈ ಪ್ರಕರಣದ ಹಿನ್ನೋಟದಲ್ಲಿ ಕಾಣಿಸಿಕೊಂಡಿದ್ದಾರೆ. ಆರೋಪಿಗಳಾದ ಸೈಯದ್ ಅನ್ಸಾರಿ ಮತ್ತು ಇಮ್ರಾನ್ ಅವರು ಈ ಉದ್ಯಮಿಗೆ ಕರೆಮಾಡಿ, “3 ಲಕ್ಷ ರೂಪಾಯಿ ಹೂಡಿಕೆಯಿಂದ ಒಂದು ತಿಂಗಳಲ್ಲಿ ಡಬ್ಬಲ್ ಮಾಡಿಸಬಹುದು” ಎಂದು ನಂಬಿಸಿ, ಜುಲೈ 26ರಂದು ಚಾಮರಾಜನಗರದ ಡೆಲ್ಲಿ ದರ್ಬಾರ್ ಹೋಟೆಲಿಗೆ ಕರೆಸಿದ್ದಾರೆ.
ಅನ್ಸಾರಿ ಹಾಗೂ ಇಮ್ರಾನ್ ಈ ಮಾಹಿತಿ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಅಯ್ಯನಗೌಡಗೆ ನೀಡಿದ್ದು, ತಕ್ಷಣವೇ ಅಯ್ಯನಗೌಡ ಅವರು ತಮಗೆ ಸಾಥ್ ನೀಡಿದ ಪೇದೆಗಳು – ಮೋಹನ್, ಮಹೇಶ್, ಬಸವಣ್ಣ, ರಮೇಶ್ ಅವರನ್ನು ಕರೆದುಕೊಂಡು ಡೆಲ್ಲಿ ದರ್ಬಾರ್ ಹೋಟೆಲ್ಗೆ ದಾಳಿ ಮಾಡಿದ್ದಾರೆ.
ಉದ್ಯಮಿಗೆ “ಇದು ಫ್ರಾಡ್ ಹೂಡಿಕೆ” ಎಂದು ಆರೋಪಿಸಿ, “ಮೇಲೆ ಕೇಸ್ ಹೋಯಿತಂದ್ರೆ ತಪ್ಪಿಸಲು ನಾಲ್ಕು ಲಕ್ಷ ಕೊಡು” ಎಂದು ಬೆದರಿಕೆ ಹಾಕಿದ್ದಾರೆ. ಹಣ ನೀಡಲು ಒಪ್ಪಿಕೊಳ್ಳದ ಸಚ್ಚಿದಾನಂದ ಅವರ ಬಳಿ ಇದ್ದ 3 ಲಕ್ಷ ರೂಪಾಯಿಗಳನ್ನು ಪಡೆದುಕೊಂಡು, ಜೊತೆಗೆ ಫೋನ್ ಪೇ ಮೂಲಕ 70 ಸಾವಿರ ರೂಪಾಯಿಗಳನ್ನು ಅನ್ಸಾರಿ ಖಾತೆಗೆ ಹಾಕಿಸಿಕೊಂಡಿದ್ದಾರೆ.
ಈ ಹಿನ್ನಲೆಯಲ್ಲಿ ಸಚ್ಚಿದಾನಂದ ಮೂರ್ತಿ ಅವರು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಆರಂಭಿಸಿದ ಪೊಲೀಸರು ಅನ್ಸಾರಿ ಮತ್ತು ಇಮ್ರಾನ್ ಅವರನ್ನು ಬಂಧಿಸಿದ್ದಾರೆ. ಆದರೆ ಪ್ರಕರಣದ ಪ್ರಮುಖ ಆರೋಪಿಗಳಾದ ಪಿಎಸ್ಐ ಅಯ್ಯನಗೌಡ ಹಾಗೂ ಪೇದೆಗಳು – ಮೋಹನ್, ಬಸವಣ್ಣ, ರಮೇಶ್ ಪರಾರಿಯಾಗಿದ್ದಾರೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಆರೋಪಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡುವ ಆದೇಶ ಹೊರಡಿಸಿದ್ದಾರೆ. ಇದೀಗ ಪರಾರಿಯಾಗಿರುವ ಪೊಲೀಸ್ ಅಧಿಕಾರಿಗಳಿಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲು ಹುಡುಕಾಟ ಮುಂದುವರಿಸಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…