Latest

ಚಾಮರಾಜನಗರದಲ್ಲಿ ಪೊಲೀಸರ ದಂಧೆ ಬಯಲು: ಉದ್ಯಮಿಯಿಂದ 3.7 ಲಕ್ಷ ವಸೂಲಿ ಮಾಡಿದ ಪಿಎಸ್‌ಐ ತಂಡ

ಚಾಮರಾಜನಗರ, ಜುಲೈ 28: ಅಧಿಕಾರದ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಯೊಬ್ಬರ ಬಳಿ ಹಣೆ ಹಾಕಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ ಘಟನೆ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದೆ. ಸೈಬರ್ ಕ್ರೈಂ ಠಾಣೆಯ ಪಿಎಸ್‌ಐ ಅಯ್ಯನಗೌಡ ಸೇರಿದಂತೆ ಆರು ಮಂದಿ ಪೊಲೀಸರ ವಿರುದ್ಧ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತಮಿಳುನಾಡು ಮೂಲದ ಉದ್ಯಮಿ ಸಚ್ಚಿದಾನಂದ ಮೂರ್ತಿ ಎಂಬುವವರು ಈ ಪ್ರಕರಣದ ಹಿನ್ನೋಟದಲ್ಲಿ ಕಾಣಿಸಿಕೊಂಡಿದ್ದಾರೆ. ಆರೋಪಿಗಳಾದ ಸೈಯದ್ ಅನ್ಸಾರಿ ಮತ್ತು ಇಮ್ರಾನ್ ಅವರು ಈ ಉದ್ಯಮಿಗೆ ಕರೆಮಾಡಿ, “3 ಲಕ್ಷ ರೂಪಾಯಿ ಹೂಡಿಕೆಯಿಂದ ಒಂದು ತಿಂಗಳಲ್ಲಿ ಡಬ್ಬಲ್ ಮಾಡಿಸಬಹುದು” ಎಂದು ನಂಬಿಸಿ, ಜುಲೈ 26ರಂದು ಚಾಮರಾಜನಗರದ ಡೆಲ್ಲಿ ದರ್ಬಾರ್ ಹೋಟೆಲಿಗೆ ಕರೆಸಿದ್ದಾರೆ.

ಅನ್ಸಾರಿ ಹಾಗೂ ಇಮ್ರಾನ್ ಈ ಮಾಹಿತಿ ಸೈಬರ್ ಕ್ರೈಂ ಠಾಣೆಯ ಪಿಎಸ್‌ಐ ಅಯ್ಯನಗೌಡಗೆ ನೀಡಿದ್ದು, ತಕ್ಷಣವೇ ಅಯ್ಯನಗೌಡ ಅವರು ತಮಗೆ ಸಾಥ್ ನೀಡಿದ ಪೇದೆಗಳು – ಮೋಹನ್, ಮಹೇಶ್, ಬಸವಣ್ಣ, ರಮೇಶ್ ಅವರನ್ನು ಕರೆದುಕೊಂಡು ಡೆಲ್ಲಿ ದರ್ಬಾರ್ ಹೋಟೆಲ್‌ಗೆ ದಾಳಿ ಮಾಡಿದ್ದಾರೆ.

ಉದ್ಯಮಿಗೆ “ಇದು ಫ್ರಾಡ್ ಹೂಡಿಕೆ” ಎಂದು ಆರೋಪಿಸಿ, “ಮೇಲೆ ಕೇಸ್ ಹೋಯಿತಂದ್ರೆ ತಪ್ಪಿಸಲು ನಾಲ್ಕು ಲಕ್ಷ ಕೊಡು” ಎಂದು ಬೆದರಿಕೆ ಹಾಕಿದ್ದಾರೆ. ಹಣ ನೀಡಲು ಒಪ್ಪಿಕೊಳ್ಳದ ಸಚ್ಚಿದಾನಂದ ಅವರ ಬಳಿ ಇದ್ದ 3 ಲಕ್ಷ ರೂಪಾಯಿಗಳನ್ನು ಪಡೆದುಕೊಂಡು, ಜೊತೆಗೆ ಫೋನ್ ಪೇ ಮೂಲಕ 70 ಸಾವಿರ ರೂಪಾಯಿಗಳನ್ನು ಅನ್ಸಾರಿ ಖಾತೆಗೆ ಹಾಕಿಸಿಕೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ಸಚ್ಚಿದಾನಂದ ಮೂರ್ತಿ ಅವರು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಆರಂಭಿಸಿದ ಪೊಲೀಸರು ಅನ್ಸಾರಿ ಮತ್ತು ಇಮ್ರಾನ್ ಅವರನ್ನು ಬಂಧಿಸಿದ್ದಾರೆ. ಆದರೆ ಪ್ರಕರಣದ ಪ್ರಮುಖ ಆರೋಪಿಗಳಾದ ಪಿಎಸ್‌ಐ ಅಯ್ಯನಗೌಡ ಹಾಗೂ ಪೇದೆಗಳು – ಮೋಹನ್, ಬಸವಣ್ಣ, ರಮೇಶ್ ಪರಾರಿಯಾಗಿದ್ದಾರೆ.

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಆರೋಪಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡುವ ಆದೇಶ ಹೊರಡಿಸಿದ್ದಾರೆ. ಇದೀಗ ಪರಾರಿಯಾಗಿರುವ ಪೊಲೀಸ್ ಅಧಿಕಾರಿಗಳಿಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲು ಹುಡುಕಾಟ ಮುಂದುವರಿಸಲಾಗಿದೆ.

 

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago