Latest

ಚಾಮರಾಜನಗರದಲ್ಲಿ ಪೊಲೀಸರ ದಂಧೆ ಬಯಲು: ಉದ್ಯಮಿಯಿಂದ 3.7 ಲಕ್ಷ ವಸೂಲಿ ಮಾಡಿದ ಪಿಎಸ್‌ಐ ತಂಡ

ಚಾಮರಾಜನಗರ, ಜುಲೈ 28: ಅಧಿಕಾರದ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಯೊಬ್ಬರ ಬಳಿ ಹಣೆ ಹಾಕಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ ಘಟನೆ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದೆ. ಸೈಬರ್ ಕ್ರೈಂ ಠಾಣೆಯ ಪಿಎಸ್‌ಐ ಅಯ್ಯನಗೌಡ ಸೇರಿದಂತೆ ಆರು ಮಂದಿ ಪೊಲೀಸರ ವಿರುದ್ಧ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತಮಿಳುನಾಡು ಮೂಲದ ಉದ್ಯಮಿ ಸಚ್ಚಿದಾನಂದ ಮೂರ್ತಿ ಎಂಬುವವರು ಈ ಪ್ರಕರಣದ ಹಿನ್ನೋಟದಲ್ಲಿ ಕಾಣಿಸಿಕೊಂಡಿದ್ದಾರೆ. ಆರೋಪಿಗಳಾದ ಸೈಯದ್ ಅನ್ಸಾರಿ ಮತ್ತು ಇಮ್ರಾನ್ ಅವರು ಈ ಉದ್ಯಮಿಗೆ ಕರೆಮಾಡಿ, “3 ಲಕ್ಷ ರೂಪಾಯಿ ಹೂಡಿಕೆಯಿಂದ ಒಂದು ತಿಂಗಳಲ್ಲಿ ಡಬ್ಬಲ್ ಮಾಡಿಸಬಹುದು” ಎಂದು ನಂಬಿಸಿ, ಜುಲೈ 26ರಂದು ಚಾಮರಾಜನಗರದ ಡೆಲ್ಲಿ ದರ್ಬಾರ್ ಹೋಟೆಲಿಗೆ ಕರೆಸಿದ್ದಾರೆ.

ಅನ್ಸಾರಿ ಹಾಗೂ ಇಮ್ರಾನ್ ಈ ಮಾಹಿತಿ ಸೈಬರ್ ಕ್ರೈಂ ಠಾಣೆಯ ಪಿಎಸ್‌ಐ ಅಯ್ಯನಗೌಡಗೆ ನೀಡಿದ್ದು, ತಕ್ಷಣವೇ ಅಯ್ಯನಗೌಡ ಅವರು ತಮಗೆ ಸಾಥ್ ನೀಡಿದ ಪೇದೆಗಳು – ಮೋಹನ್, ಮಹೇಶ್, ಬಸವಣ್ಣ, ರಮೇಶ್ ಅವರನ್ನು ಕರೆದುಕೊಂಡು ಡೆಲ್ಲಿ ದರ್ಬಾರ್ ಹೋಟೆಲ್‌ಗೆ ದಾಳಿ ಮಾಡಿದ್ದಾರೆ.

ಉದ್ಯಮಿಗೆ “ಇದು ಫ್ರಾಡ್ ಹೂಡಿಕೆ” ಎಂದು ಆರೋಪಿಸಿ, “ಮೇಲೆ ಕೇಸ್ ಹೋಯಿತಂದ್ರೆ ತಪ್ಪಿಸಲು ನಾಲ್ಕು ಲಕ್ಷ ಕೊಡು” ಎಂದು ಬೆದರಿಕೆ ಹಾಕಿದ್ದಾರೆ. ಹಣ ನೀಡಲು ಒಪ್ಪಿಕೊಳ್ಳದ ಸಚ್ಚಿದಾನಂದ ಅವರ ಬಳಿ ಇದ್ದ 3 ಲಕ್ಷ ರೂಪಾಯಿಗಳನ್ನು ಪಡೆದುಕೊಂಡು, ಜೊತೆಗೆ ಫೋನ್ ಪೇ ಮೂಲಕ 70 ಸಾವಿರ ರೂಪಾಯಿಗಳನ್ನು ಅನ್ಸಾರಿ ಖಾತೆಗೆ ಹಾಕಿಸಿಕೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ಸಚ್ಚಿದಾನಂದ ಮೂರ್ತಿ ಅವರು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಆರಂಭಿಸಿದ ಪೊಲೀಸರು ಅನ್ಸಾರಿ ಮತ್ತು ಇಮ್ರಾನ್ ಅವರನ್ನು ಬಂಧಿಸಿದ್ದಾರೆ. ಆದರೆ ಪ್ರಕರಣದ ಪ್ರಮುಖ ಆರೋಪಿಗಳಾದ ಪಿಎಸ್‌ಐ ಅಯ್ಯನಗೌಡ ಹಾಗೂ ಪೇದೆಗಳು – ಮೋಹನ್, ಬಸವಣ್ಣ, ರಮೇಶ್ ಪರಾರಿಯಾಗಿದ್ದಾರೆ.

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಆರೋಪಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡುವ ಆದೇಶ ಹೊರಡಿಸಿದ್ದಾರೆ. ಇದೀಗ ಪರಾರಿಯಾಗಿರುವ ಪೊಲೀಸ್ ಅಧಿಕಾರಿಗಳಿಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲು ಹುಡುಕಾಟ ಮುಂದುವರಿಸಲಾಗಿದೆ.

 

nazeer ahamad

Recent Posts

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

3 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

3 hours ago

ಮುತ್ತತ್ತಿಯಲ್ಲಿ ದಾರುಣ ದುರಂತ: ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…

3 hours ago

₹15 ಲಕ್ಷ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ! ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರ ಚಾಣಾಕ್ಷ ತನಿಖೆ

ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…

3 hours ago

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

3 hours ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

3 hours ago