Crime

ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ 15 ಜನರ ಮೇಲೆ ಪೋಲಿಸರ ದಾಳಿ , ಮೂವರ ಬಂಧನ

ಭಟ್ಕಳ, ಜೂನ್ 1 – ಭಟ್ಕಳ ತಾಲ್ಲೂಕಿನ ನೂಜ್ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ 12 ಮಂದಿ ಕಾಡಿನಲ್ಲಿ ಓಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಮೇ 30ರ ರಾತ್ರಿ, ಸುಮಾರು 15 ಮಂದಿ ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಹಣ ಪಣವಿಟ್ಟು ಇಸ್ಪೀಟ್ ಆಟವಾಡುತ್ತಿದ್ದರು. ಈ ವಿಷಯದ ಬಗ್ಗೆ ಭಟ್ಕಳ ಡಿವೈಎಸ್‌ಪಿ ಮಹೇಶ್ ಎಂ.ಕೆ. ಅವರಿಗೆ ಖಚಿತ ಮಾಹಿತಿ ದೊರೆಯಿತು. ತಕ್ಷಣವೇ ಅವರು ಸಿಪಿಐ ಮಂಜುನಾಥ ಲಿಂಗರೆಡ್ಡಿ, ಪಿಎಸ್‌ಐ ಬರಮಪ್ಪ ಬೆಳಗಲಿ ಹಾಗೂ ಸಿಬ್ಬಂದಿಗಳಾದ ಶಿವಾನಂದ ವಡ್ಡರ್, ಶ್ರೀಪಾದ ನಾಯ್ಕ, ವೀರಣ್ಣ ಬಳ್ಳಾರಿ, ಮದಾರಸಾಬ ಚಕ್ಕೇರಿ, ಮಂಜುನಾಥ ನಾಯ್ಕ ಮತ್ತು ವಾಹನ ಚಾಲಕ ಸಂತೋಷ ನಾಯ್ಕ ಅವರೊಂದಿಗೆ ಕಾಡಿನ ಕಡೆಗೆ ದಾಳಿ ನಡೆಸಿದರು.

ಪೊಲೀಸರು ಸ್ಥಳಕ್ಕೆ ಧಾವಿಸಿ ಆಟವಾಡುತ್ತಿದ್ದವರನ್ನು ಚತುಷ್ಪಥದಿಂದ ಸುತ್ತಿಬಿದ್ದರು. ಈ ವೇಳೆ ಬೈಂದೂರಿನ ಬೋಟಿ ಕಾರ್ಮಿಕ ಗೋಪಾಲ ಖಾರ್ವಿ, ಭಟ್ಕಳದ ಉತ್ತರಕೊಪ್ಪದ ನಾರಾಯಣ ನಾಯ್ಕ ಮತ್ತು ಸಿದ್ದಾಪುರದ ಜಬ್ಬಾರ ಸಾಬ್ ಎಂಬವರನ್ನು ಬಂಧಿಸಲಾಗಿದೆ. ಇನ್ನುಳಿದವರು ಕಾಡಿನ ದಿಕ್ಕಿಗೆ ಓಡಿದ್ದು, ಪೊಲೀಸರ ಬೆನ್ನಟ್ಟಿದರೂ ಬಂಧನ ತಪ್ಪಿಸಿಕೊಂಡಿದ್ದಾರೆ.

ಪೋಲೀಸರು ಓಡಿಹೋದವರನ್ನು ಗುರುತಿಸಿದ್ದು, ಮುರುಡೇಶ್ವರದ ಜಯಂತ ನಾಯ್ಕ, ಶಿರಾಲಿಯ ಬಾಬು ನಾಯ್ಕ, ಕೋಟೆಬಾಗಿಲಿನ ದತ್ತಾ ನಾಯ್ಕ, ಮುರುಡೇಶ್ವರದ ಇರ್ಫಾನ್, ಉತ್ತರಕೊಪ್ಪದ ಕುಮಾರ ಗೌಡ ಹಾಗೂ ಬೈಂದೂರಿನ ರಾಜೇಶ್ ಸೇರಿ ಇನ್ನೂ ಆರು ಮಂದಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತರಿಂದ 9700 ರೂಪಾಯಿ ನಗದು ಹಾಗೂ 8075 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದ ಪೊಲೀಸರು, ಈ ಎಲ್ಲಾ ವಸ್ತುಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣವನ್ನು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ವರದಿ: ಕುಮಾರ್ ನಾಯ್ಕ

nazeer ahamad

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

14 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

14 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

15 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

17 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

17 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

20 hours ago