Crime

ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ 15 ಜನರ ಮೇಲೆ ಪೋಲಿಸರ ದಾಳಿ , ಮೂವರ ಬಂಧನ

ಭಟ್ಕಳ, ಜೂನ್ 1 – ಭಟ್ಕಳ ತಾಲ್ಲೂಕಿನ ನೂಜ್ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ 12 ಮಂದಿ ಕಾಡಿನಲ್ಲಿ ಓಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಮೇ 30ರ ರಾತ್ರಿ, ಸುಮಾರು 15 ಮಂದಿ ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಹಣ ಪಣವಿಟ್ಟು ಇಸ್ಪೀಟ್ ಆಟವಾಡುತ್ತಿದ್ದರು. ಈ ವಿಷಯದ ಬಗ್ಗೆ ಭಟ್ಕಳ ಡಿವೈಎಸ್‌ಪಿ ಮಹೇಶ್ ಎಂ.ಕೆ. ಅವರಿಗೆ ಖಚಿತ ಮಾಹಿತಿ ದೊರೆಯಿತು. ತಕ್ಷಣವೇ ಅವರು ಸಿಪಿಐ ಮಂಜುನಾಥ ಲಿಂಗರೆಡ್ಡಿ, ಪಿಎಸ್‌ಐ ಬರಮಪ್ಪ ಬೆಳಗಲಿ ಹಾಗೂ ಸಿಬ್ಬಂದಿಗಳಾದ ಶಿವಾನಂದ ವಡ್ಡರ್, ಶ್ರೀಪಾದ ನಾಯ್ಕ, ವೀರಣ್ಣ ಬಳ್ಳಾರಿ, ಮದಾರಸಾಬ ಚಕ್ಕೇರಿ, ಮಂಜುನಾಥ ನಾಯ್ಕ ಮತ್ತು ವಾಹನ ಚಾಲಕ ಸಂತೋಷ ನಾಯ್ಕ ಅವರೊಂದಿಗೆ ಕಾಡಿನ ಕಡೆಗೆ ದಾಳಿ ನಡೆಸಿದರು.

ಪೊಲೀಸರು ಸ್ಥಳಕ್ಕೆ ಧಾವಿಸಿ ಆಟವಾಡುತ್ತಿದ್ದವರನ್ನು ಚತುಷ್ಪಥದಿಂದ ಸುತ್ತಿಬಿದ್ದರು. ಈ ವೇಳೆ ಬೈಂದೂರಿನ ಬೋಟಿ ಕಾರ್ಮಿಕ ಗೋಪಾಲ ಖಾರ್ವಿ, ಭಟ್ಕಳದ ಉತ್ತರಕೊಪ್ಪದ ನಾರಾಯಣ ನಾಯ್ಕ ಮತ್ತು ಸಿದ್ದಾಪುರದ ಜಬ್ಬಾರ ಸಾಬ್ ಎಂಬವರನ್ನು ಬಂಧಿಸಲಾಗಿದೆ. ಇನ್ನುಳಿದವರು ಕಾಡಿನ ದಿಕ್ಕಿಗೆ ಓಡಿದ್ದು, ಪೊಲೀಸರ ಬೆನ್ನಟ್ಟಿದರೂ ಬಂಧನ ತಪ್ಪಿಸಿಕೊಂಡಿದ್ದಾರೆ.

ಪೋಲೀಸರು ಓಡಿಹೋದವರನ್ನು ಗುರುತಿಸಿದ್ದು, ಮುರುಡೇಶ್ವರದ ಜಯಂತ ನಾಯ್ಕ, ಶಿರಾಲಿಯ ಬಾಬು ನಾಯ್ಕ, ಕೋಟೆಬಾಗಿಲಿನ ದತ್ತಾ ನಾಯ್ಕ, ಮುರುಡೇಶ್ವರದ ಇರ್ಫಾನ್, ಉತ್ತರಕೊಪ್ಪದ ಕುಮಾರ ಗೌಡ ಹಾಗೂ ಬೈಂದೂರಿನ ರಾಜೇಶ್ ಸೇರಿ ಇನ್ನೂ ಆರು ಮಂದಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತರಿಂದ 9700 ರೂಪಾಯಿ ನಗದು ಹಾಗೂ 8075 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದ ಪೊಲೀಸರು, ಈ ಎಲ್ಲಾ ವಸ್ತುಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣವನ್ನು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ವರದಿ: ಕುಮಾರ್ ನಾಯ್ಕ

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago