Crime

ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ 15 ಜನರ ಮೇಲೆ ಪೋಲಿಸರ ದಾಳಿ , ಮೂವರ ಬಂಧನ

ಭಟ್ಕಳ, ಜೂನ್ 1 – ಭಟ್ಕಳ ತಾಲ್ಲೂಕಿನ ನೂಜ್ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ 12 ಮಂದಿ ಕಾಡಿನಲ್ಲಿ ಓಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಮೇ 30ರ ರಾತ್ರಿ, ಸುಮಾರು 15 ಮಂದಿ ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಹಣ ಪಣವಿಟ್ಟು ಇಸ್ಪೀಟ್ ಆಟವಾಡುತ್ತಿದ್ದರು. ಈ ವಿಷಯದ ಬಗ್ಗೆ ಭಟ್ಕಳ ಡಿವೈಎಸ್‌ಪಿ ಮಹೇಶ್ ಎಂ.ಕೆ. ಅವರಿಗೆ ಖಚಿತ ಮಾಹಿತಿ ದೊರೆಯಿತು. ತಕ್ಷಣವೇ ಅವರು ಸಿಪಿಐ ಮಂಜುನಾಥ ಲಿಂಗರೆಡ್ಡಿ, ಪಿಎಸ್‌ಐ ಬರಮಪ್ಪ ಬೆಳಗಲಿ ಹಾಗೂ ಸಿಬ್ಬಂದಿಗಳಾದ ಶಿವಾನಂದ ವಡ್ಡರ್, ಶ್ರೀಪಾದ ನಾಯ್ಕ, ವೀರಣ್ಣ ಬಳ್ಳಾರಿ, ಮದಾರಸಾಬ ಚಕ್ಕೇರಿ, ಮಂಜುನಾಥ ನಾಯ್ಕ ಮತ್ತು ವಾಹನ ಚಾಲಕ ಸಂತೋಷ ನಾಯ್ಕ ಅವರೊಂದಿಗೆ ಕಾಡಿನ ಕಡೆಗೆ ದಾಳಿ ನಡೆಸಿದರು.

ಪೊಲೀಸರು ಸ್ಥಳಕ್ಕೆ ಧಾವಿಸಿ ಆಟವಾಡುತ್ತಿದ್ದವರನ್ನು ಚತುಷ್ಪಥದಿಂದ ಸುತ್ತಿಬಿದ್ದರು. ಈ ವೇಳೆ ಬೈಂದೂರಿನ ಬೋಟಿ ಕಾರ್ಮಿಕ ಗೋಪಾಲ ಖಾರ್ವಿ, ಭಟ್ಕಳದ ಉತ್ತರಕೊಪ್ಪದ ನಾರಾಯಣ ನಾಯ್ಕ ಮತ್ತು ಸಿದ್ದಾಪುರದ ಜಬ್ಬಾರ ಸಾಬ್ ಎಂಬವರನ್ನು ಬಂಧಿಸಲಾಗಿದೆ. ಇನ್ನುಳಿದವರು ಕಾಡಿನ ದಿಕ್ಕಿಗೆ ಓಡಿದ್ದು, ಪೊಲೀಸರ ಬೆನ್ನಟ್ಟಿದರೂ ಬಂಧನ ತಪ್ಪಿಸಿಕೊಂಡಿದ್ದಾರೆ.

ಪೋಲೀಸರು ಓಡಿಹೋದವರನ್ನು ಗುರುತಿಸಿದ್ದು, ಮುರುಡೇಶ್ವರದ ಜಯಂತ ನಾಯ್ಕ, ಶಿರಾಲಿಯ ಬಾಬು ನಾಯ್ಕ, ಕೋಟೆಬಾಗಿಲಿನ ದತ್ತಾ ನಾಯ್ಕ, ಮುರುಡೇಶ್ವರದ ಇರ್ಫಾನ್, ಉತ್ತರಕೊಪ್ಪದ ಕುಮಾರ ಗೌಡ ಹಾಗೂ ಬೈಂದೂರಿನ ರಾಜೇಶ್ ಸೇರಿ ಇನ್ನೂ ಆರು ಮಂದಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತರಿಂದ 9700 ರೂಪಾಯಿ ನಗದು ಹಾಗೂ 8075 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದ ಪೊಲೀಸರು, ಈ ಎಲ್ಲಾ ವಸ್ತುಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣವನ್ನು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ವರದಿ: ಕುಮಾರ್ ನಾಯ್ಕ

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

10 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

17 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

17 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago