ದಾವಣಗೆರೆ ನಗರದಲ್ಲಿ ಇತ್ತೀಚೆಗೆ ನಡೆದ ಜಿಮ್ಗೆ ಸಂಬಂಧಿಸಿದ ಘಟನೆಯ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಜಿಲ್ಲಾ ಪೊಲೀಸ್ ಇಲಾಖೆ, ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ ಜಿಲ್ಲೆಯಾದ್ಯಂತ ಜಿಮ್ಗಳಲ್ಲಿ ದಿಢೀರ್ ಪರಿಶೀಲನಾ ಕಾರ್ಯಾಚರಣೆ ಆರಂಭಿಸಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಶೇಖರ್ ಹೆಚ್.ಟಿ., ಐಪಿಎಸ್ ಅವರ ಮಾರ್ಗದರ್ಶನ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಅವರ ಉಸ್ತುವಾರಿಯಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಡಿವೈಎಸ್ಪಿಗಳು ಮತ್ತು ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.
ಕಾರ್ಯಾಚರಣೆಯ ಮೊದಲ ಹಂತವಾಗಿ ಮಂಗಳವಾರ ಬೆಳಿಗ್ಗೆ ದಾವಣಗೆರೆ ನಗರದ ವಿವಿಧ ಜಿಮ್ಗಳಿಗೆ ಪೊಲೀಸ್ ತಂಡಗಳು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದವು. ಈ ವೇಳೆ ಮಹಿಳಾ ಸದಸ್ಯರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳು, ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಸಿಬ್ಬಂದಿಯ ವರ್ತನೆ ಹಾಗೂ ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲಾಯಿತು.
ಜಿಮ್ಗೆ ಬರುವ ಮಹಿಳೆಯರೊಂದಿಗೆ ಗೌರವಯುತವಾಗಿ ವರ್ತಿಸಬೇಕು. ಯಾವುದೇ ರೀತಿಯ ಕಿರುಕುಳ, ಅನುಚಿತ ವರ್ತನೆ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಜಿಮ್ ಮಾಲೀಕರು ಮತ್ತು ಸಿಬ್ಬಂದಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಹಿಳೆಯರ ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಯಾವುದೇ ಘಟನೆ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.
ಜಿಲ್ಲೆಯಾದ್ಯಂತ ಈ ವಿಶೇಷ ಪರಿಶೀಲನಾ ಕಾರ್ಯಾಚರಣೆ ಮುಂದುವರಿಯಲಿದ್ದು, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಸಾರ್ವಜನಿಕ ಸಾರಿಗೆ ಬಸ್ನಲ್ಲಿ ಬಾಕಿ ಚಿಲ್ಲರೆ ಹಣ ಕೇಳಿದ ಪ್ರಯಾಣಿಕನೊಂದಿಗೆ ನಿರ್ವಾಹಕ (ಕಂಡಕ್ಟರ್) ಜಗಳವಾಡಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ…
ಚಿಕ್ಕಬಳ್ಳಾಪುರ: ನ್ಯಾಯಾಲಯದಲ್ಲಿ ತನ್ನ ಪರವಾಗಿ ಅನುಕೂಲಕರ ತೀರ್ಪು ಬರಬೇಕೆಂಬ ಉದ್ದೇಶದಿಂದ ಮಹಿಳಾ ನ್ಯಾಯಾಧೀಶರ ಕುರ್ಚಿಗೆ ಮಾಟ-ಮಂತ್ರ ಮಾಡಿರುವ ಆರೋಪದ ಘಟನೆ…
ಬೆಂಗಳೂರು: ರಾಜಧಾನಿಯ ರಿಯಲ್ ಎಸ್ಟೇಟ್ ವಂಚನೆ ಪ್ರಕರಣಗಳಲ್ಲಿ ಅತ್ಯಂತ ಸಂಚಲನ ಮೂಡಿಸಿರುವ ಪ್ರಕರಣವೊಂದನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಶ್ರೀ ಆದಿಚುಂಚನಗಿರಿ…
ಹರಿಹರ: ನಗರದ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ನಡೆಯುತ್ತಿರುವ ಚರಂಡಿ ನಿರ್ಮಾಣ ಕಾಮಗಾರಿಯನ್ನು ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕ…
ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ ಕರ್ನಾಟಕ ಸರ್ಕಾರ ಮಹತ್ವದ ಸೌಲಭ್ಯ ಘೋಷಿಸಿದೆ. 2026–27ನೇ ಶೈಕ್ಷಣಿಕ ಸಾಲಿನಿಂದ…
ಬೆಂಗಳೂರು: ಪತ್ನಿ ಹಾಗೂ ಮಾವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಪಿಎಸ್ಐ ಭೈರಪ್ಪ ವಿರುದ್ಧ ಕೇಳಿಬಂದಿದೆ.…