Latest

ಲಂಚದ ಆಸೆಗೆ ಬಿದ್ದ ಪೊಲೀಸರು ಠಾಣೆ ಬಿಟ್ಟು ದೌಡು.

ಗುತ್ತಿಗೆದಾರ ಪ್ರಕಾಶ್ ಎಂಬುವರ ಮೇಲೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಈ ಪ್ರಕರಣದಲ್ಲಿ ತ್ವರಿತವಾಗಿ ದೋಷಾರೋಪ ಪಟ್ಟಿ ಸಲ್ಲಿಸಲು ಹಾಗೂ ಪ್ರಕಾಶ್ ಅವರ ತಂದೆ ತಾಯಿ ಹಾಗೂ ಸಂಬಂಧಿಕರ ಹೆಸರು ಸೇರಿಸದೇ ಇರಲು ಐದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೂರು ಲಕ್ಷ ರೂ. 65 ಸಾವಿರ ರೂ.ಗಳನ್ನು ಹೆಡ್ ಕಾನ್‌ಸ್ಟೇಬಲ್ ರವಿ ಮೂಲಕ ಸ್ವೀಕರಿಸಿದ್ದರು.
ಆ ಬಳಿಕ ಮತ್ತೆ ಐದು ಲಕ್ಷ ರೂ. ಲಂಚ ನಿಡುವಂತೆ ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಹಣವನ್ನು ನೀಡದಿದ್ದಕ್ಕೆ ಗುತ್ತಿಗೆದಾರ ಪ್ರಕಾಶ್ ಅವರ ಪೋಷಕರಿಗೆ ಹಾಗೂ ಬಾಮೈದನಿಗೆ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಲಂಚ ನೀಡಲು ಇಷ್ಟವಿಲ್ಲದ ಕಾರಣ ಗುತ್ತಿಗೆದಾರನ ಸಂಬಂಧಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ಲಂಚ ತರುವಂತೆ ಕರೆ ಮಾಡಿ ಹೇಳಿದ್ದ ಪೇದೆ ರವಿ ಕುಮಾರ್, ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಇದ್ದಾರೆ ಎಂದು ಚಿಕ್ಕಜಾಲ ಪೊಲೀಸ್ ಠಾಣೆ ಬಳಿ ಕರೆಸಿಕೊಂಡಿದ್ದಾನೆ. ಲಂಚದ ಹಣ ಸ್ವೀಕರಿಸಿ ಇನ್ನೇನು ಲೋಕಾ ಬಲೆಗೆ ಬೀಳುವ ಮುನ್ನ ಕಾನ್‌ಸ್ಟೇಬಲ್ ರವಿ ಎಚ್ಚೆತ್ತುಕೊಂಡಿದ್ದಾನೆ. ಲಂಚ ಕೊಡಲು ಹೋಗಿದ್ದ ವ್ಯಕ್ತಿಗೆ ಬಂದ ಕರೆಯ ನಂಬರ್ ನ್ನು ಟ್ರೂ ಕಾಲರ್ ಆಪ್ ನಲ್ಲಿ ನೋಡಿ ಎಸಿಬಿ ಪೊಲೀಸ್ ಎಂದು ಹೆದರಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಅಚ್ಚರಿ ಏನೆಂದರೆ ಈ ಲಂಚ ಸ್ವೀಕರಿಸುವ ಮುನ್ನವೇ ಪೋನ್ ಪೇ ಮೂಲಕ ಹತ್ತು ಸಾವಿರ ಲಂಚದ ಹಣವನ್ನು ಮೂರನೇ ವ್ಯಕ್ತಿಯ ಮೊಬೈಲ್ ಗೆ ಹಾಕಿಸಿಕೊಂಡು ಲಂಚ ಪಡೆದುಕೊಂಡಿದ್ದ. ಸಾಕ್ಷಾಧಾರಗಳನ್ನು ಪರಿಶೀಲಿಸಿದ ಲೋಕಾಯುಕ್ತ ಪೊಲೀಸರು ಕಾನ್‌ಸ್ಟೇಬಲ್ ರವಿಯನ್ನು ಬಂಧಿಸಿದ್ದಾರೆ. ಕಾನ್‌ಸ್ಟೇಬಲ್ ಬಂಧನ ಆಗುತ್ತಿದ್ದಂತೆ ಪೊಲೀಸ್ ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಅವರ ಎರಡು ಮೊಬೈಲ್ ನಂಬರ್ ಸ್ವಿಚ್ ಆಫ್ ಆಗಿದ್ದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಪ್ರವೀಣ್ ಅವರು ನಿರೀಕ್ಷಣಾ ಜಾಮೀನು ಪಡೆಯುವ ಸಲುವಾಗಿ ಠಾಣೆಗೆ ಹಾಜರಾಗದೇ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago