ಗುತ್ತಿಗೆದಾರ ಪ್ರಕಾಶ್ ಎಂಬುವರ ಮೇಲೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಈ ಪ್ರಕರಣದಲ್ಲಿ ತ್ವರಿತವಾಗಿ ದೋಷಾರೋಪ ಪಟ್ಟಿ ಸಲ್ಲಿಸಲು ಹಾಗೂ ಪ್ರಕಾಶ್ ಅವರ ತಂದೆ ತಾಯಿ ಹಾಗೂ ಸಂಬಂಧಿಕರ ಹೆಸರು ಸೇರಿಸದೇ ಇರಲು ಐದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೂರು ಲಕ್ಷ ರೂ. 65 ಸಾವಿರ ರೂ.ಗಳನ್ನು ಹೆಡ್ ಕಾನ್ಸ್ಟೇಬಲ್ ರವಿ ಮೂಲಕ ಸ್ವೀಕರಿಸಿದ್ದರು.
ಆ ಬಳಿಕ ಮತ್ತೆ ಐದು ಲಕ್ಷ ರೂ. ಲಂಚ ನಿಡುವಂತೆ ಇನ್ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಹಣವನ್ನು ನೀಡದಿದ್ದಕ್ಕೆ ಗುತ್ತಿಗೆದಾರ ಪ್ರಕಾಶ್ ಅವರ ಪೋಷಕರಿಗೆ ಹಾಗೂ ಬಾಮೈದನಿಗೆ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಲಂಚ ನೀಡಲು ಇಷ್ಟವಿಲ್ಲದ ಕಾರಣ ಗುತ್ತಿಗೆದಾರನ ಸಂಬಂಧಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ಲಂಚ ತರುವಂತೆ ಕರೆ ಮಾಡಿ ಹೇಳಿದ್ದ ಪೇದೆ ರವಿ ಕುಮಾರ್, ಇನ್ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಇದ್ದಾರೆ ಎಂದು ಚಿಕ್ಕಜಾಲ ಪೊಲೀಸ್ ಠಾಣೆ ಬಳಿ ಕರೆಸಿಕೊಂಡಿದ್ದಾನೆ. ಲಂಚದ ಹಣ ಸ್ವೀಕರಿಸಿ ಇನ್ನೇನು ಲೋಕಾ ಬಲೆಗೆ ಬೀಳುವ ಮುನ್ನ ಕಾನ್ಸ್ಟೇಬಲ್ ರವಿ ಎಚ್ಚೆತ್ತುಕೊಂಡಿದ್ದಾನೆ. ಲಂಚ ಕೊಡಲು ಹೋಗಿದ್ದ ವ್ಯಕ್ತಿಗೆ ಬಂದ ಕರೆಯ ನಂಬರ್ ನ್ನು ಟ್ರೂ ಕಾಲರ್ ಆಪ್ ನಲ್ಲಿ ನೋಡಿ ಎಸಿಬಿ ಪೊಲೀಸ್ ಎಂದು ಹೆದರಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಅಚ್ಚರಿ ಏನೆಂದರೆ ಈ ಲಂಚ ಸ್ವೀಕರಿಸುವ ಮುನ್ನವೇ ಪೋನ್ ಪೇ ಮೂಲಕ ಹತ್ತು ಸಾವಿರ ಲಂಚದ ಹಣವನ್ನು ಮೂರನೇ ವ್ಯಕ್ತಿಯ ಮೊಬೈಲ್ ಗೆ ಹಾಕಿಸಿಕೊಂಡು ಲಂಚ ಪಡೆದುಕೊಂಡಿದ್ದ. ಸಾಕ್ಷಾಧಾರಗಳನ್ನು ಪರಿಶೀಲಿಸಿದ ಲೋಕಾಯುಕ್ತ ಪೊಲೀಸರು ಕಾನ್ಸ್ಟೇಬಲ್ ರವಿಯನ್ನು ಬಂಧಿಸಿದ್ದಾರೆ. ಕಾನ್ಸ್ಟೇಬಲ್ ಬಂಧನ ಆಗುತ್ತಿದ್ದಂತೆ ಪೊಲೀಸ್ ಇನ್ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಅವರ ಎರಡು ಮೊಬೈಲ್ ನಂಬರ್ ಸ್ವಿಚ್ ಆಫ್ ಆಗಿದ್ದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಪ್ರವೀಣ್ ಅವರು ನಿರೀಕ್ಷಣಾ ಜಾಮೀನು ಪಡೆಯುವ ಸಲುವಾಗಿ ಠಾಣೆಗೆ ಹಾಜರಾಗದೇ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…