Latest

ಲಂಚದ ಆಸೆಗೆ ಬಿದ್ದ ಪೊಲೀಸರು ಠಾಣೆ ಬಿಟ್ಟು ದೌಡು.

ಗುತ್ತಿಗೆದಾರ ಪ್ರಕಾಶ್ ಎಂಬುವರ ಮೇಲೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಈ ಪ್ರಕರಣದಲ್ಲಿ ತ್ವರಿತವಾಗಿ ದೋಷಾರೋಪ ಪಟ್ಟಿ ಸಲ್ಲಿಸಲು ಹಾಗೂ ಪ್ರಕಾಶ್ ಅವರ ತಂದೆ ತಾಯಿ ಹಾಗೂ ಸಂಬಂಧಿಕರ ಹೆಸರು ಸೇರಿಸದೇ ಇರಲು ಐದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೂರು ಲಕ್ಷ ರೂ. 65 ಸಾವಿರ ರೂ.ಗಳನ್ನು ಹೆಡ್ ಕಾನ್‌ಸ್ಟೇಬಲ್ ರವಿ ಮೂಲಕ ಸ್ವೀಕರಿಸಿದ್ದರು.
ಆ ಬಳಿಕ ಮತ್ತೆ ಐದು ಲಕ್ಷ ರೂ. ಲಂಚ ನಿಡುವಂತೆ ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಹಣವನ್ನು ನೀಡದಿದ್ದಕ್ಕೆ ಗುತ್ತಿಗೆದಾರ ಪ್ರಕಾಶ್ ಅವರ ಪೋಷಕರಿಗೆ ಹಾಗೂ ಬಾಮೈದನಿಗೆ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಲಂಚ ನೀಡಲು ಇಷ್ಟವಿಲ್ಲದ ಕಾರಣ ಗುತ್ತಿಗೆದಾರನ ಸಂಬಂಧಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ಲಂಚ ತರುವಂತೆ ಕರೆ ಮಾಡಿ ಹೇಳಿದ್ದ ಪೇದೆ ರವಿ ಕುಮಾರ್, ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಇದ್ದಾರೆ ಎಂದು ಚಿಕ್ಕಜಾಲ ಪೊಲೀಸ್ ಠಾಣೆ ಬಳಿ ಕರೆಸಿಕೊಂಡಿದ್ದಾನೆ. ಲಂಚದ ಹಣ ಸ್ವೀಕರಿಸಿ ಇನ್ನೇನು ಲೋಕಾ ಬಲೆಗೆ ಬೀಳುವ ಮುನ್ನ ಕಾನ್‌ಸ್ಟೇಬಲ್ ರವಿ ಎಚ್ಚೆತ್ತುಕೊಂಡಿದ್ದಾನೆ. ಲಂಚ ಕೊಡಲು ಹೋಗಿದ್ದ ವ್ಯಕ್ತಿಗೆ ಬಂದ ಕರೆಯ ನಂಬರ್ ನ್ನು ಟ್ರೂ ಕಾಲರ್ ಆಪ್ ನಲ್ಲಿ ನೋಡಿ ಎಸಿಬಿ ಪೊಲೀಸ್ ಎಂದು ಹೆದರಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಅಚ್ಚರಿ ಏನೆಂದರೆ ಈ ಲಂಚ ಸ್ವೀಕರಿಸುವ ಮುನ್ನವೇ ಪೋನ್ ಪೇ ಮೂಲಕ ಹತ್ತು ಸಾವಿರ ಲಂಚದ ಹಣವನ್ನು ಮೂರನೇ ವ್ಯಕ್ತಿಯ ಮೊಬೈಲ್ ಗೆ ಹಾಕಿಸಿಕೊಂಡು ಲಂಚ ಪಡೆದುಕೊಂಡಿದ್ದ. ಸಾಕ್ಷಾಧಾರಗಳನ್ನು ಪರಿಶೀಲಿಸಿದ ಲೋಕಾಯುಕ್ತ ಪೊಲೀಸರು ಕಾನ್‌ಸ್ಟೇಬಲ್ ರವಿಯನ್ನು ಬಂಧಿಸಿದ್ದಾರೆ. ಕಾನ್‌ಸ್ಟೇಬಲ್ ಬಂಧನ ಆಗುತ್ತಿದ್ದಂತೆ ಪೊಲೀಸ್ ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಅವರ ಎರಡು ಮೊಬೈಲ್ ನಂಬರ್ ಸ್ವಿಚ್ ಆಫ್ ಆಗಿದ್ದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಪ್ರವೀಣ್ ಅವರು ನಿರೀಕ್ಷಣಾ ಜಾಮೀನು ಪಡೆಯುವ ಸಲುವಾಗಿ ಠಾಣೆಗೆ ಹಾಜರಾಗದೇ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago