ಭಟ್ಕಳ ತಾಲ್ಲೂಕಿನ ಶಿರಾಲಿ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಲಾರಿಗೆ ತಡೆ ನೀಡಿದ ಸಂದರ್ಭದಲ್ಲಿ, 13 ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ರಾಜಾರೋಷವಾಗಿ ಕೊಂಡೊಯ್ಯಲಾಗುತ್ತಿತ್ತು ಎಂಬುದನ್ನು ಪತ್ತೆಹಚ್ಚಿದ್ದಾರೆ.
ಪೊಲೀಸರು ಲಾರಿ ಚಾಲಕನಿಗೆ ದಾಖಲೆಗಳನ್ನು ಕೇಳಿದಾಗ, ಅವನ ಬಳಿ ಯಾವುದೇ ಕಾಗದ ಪತ್ರಗಳಿರಲಿಲ್ಲ. ತಕ್ಷಣವೇ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು, ಜಾನುವಾರುಗಳನ್ನು ರಕ್ಷಿಸಿದರು. ಲಾರಿಯಲ್ಲಿದ್ದ ಉಳಿದ ಮೂವರು ಓಡಿ ತಪ್ಪಿಸಿಕೊಂಡಿದ್ದಾರೆ.
ಲಾರಿಯಲ್ಲಿ ಒಟ್ಟು 9 ಎತ್ತು ಮತ್ತು 4 ಕೋಣಗಳಿದ್ದು, ಅವು ಮಹಾರಾಷ್ಟ್ರದ ಪಾಲೇಗಾಂವ್ನಿಂದ ಭಟ್ಕಳದತ್ತ ಸಾಗುತ್ತಿದವು. ಈ ಸಂಬಂಧ, ಔರಂಗಾಬಾದ್ ಜಿಲ್ಲೆಯ ಜಮೀಲ್ ಯೂಸುಫ್ ಶೇಖ್ (49) ಎಂಬಾತನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.
ಈ ಕಾರ್ಯಾಚರಣೆ ಹಿಂದು ಜಾಗರಣ ವೇದಿಕೆಯ ಮಾಹಿತಿ ಆಧಾರದ ಮೇಲೆ ಡಿವೈಎಸ್ಪಿ ಮಹೇಶ್ ಕೆ ಅವರ ಮಾರ್ಗದರ್ಶನದಲ್ಲಿ ಜರುಗಿತು. ಪಿಎಸೈ ರನ್ನ ಗೌಡ ಪಾಟೀಲ ಮತ್ತು ಭರ್ಮಪ್ಪ ಬೆಳಗಲಿ ನೇತೃತ್ವದಲ್ಲಿ ಎಎಸ್ಐ ಕೃಷ್ಣಾನಂದ ನಾಯ್ಕ, ಪೊಲೀಸ್ ಸಿಬ್ಬಂದಿ ಬಸವರಾಜ ಡಿ ಕೆ, ಮೋಹನ ಕಬ್ಬೇರ, ವೀರಣ್ಣ ಬಳ್ಳಾರಿ, ಲೋಹಿತ್ ಕುಮಾರ ಎಂ.ಪಿ., ಅಂಬರೀಶ ಕುಂಬಾರಿ ಮತ್ತು ಕಿರಣ ತಿಳಗಂಜಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…