ಭಟ್ಕಳ ತಾಲ್ಲೂಕಿನ ಶಿರಾಲಿ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಲಾರಿಗೆ ತಡೆ ನೀಡಿದ ಸಂದರ್ಭದಲ್ಲಿ, 13 ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ರಾಜಾರೋಷವಾಗಿ ಕೊಂಡೊಯ್ಯಲಾಗುತ್ತಿತ್ತು ಎಂಬುದನ್ನು ಪತ್ತೆಹಚ್ಚಿದ್ದಾರೆ.
ಪೊಲೀಸರು ಲಾರಿ ಚಾಲಕನಿಗೆ ದಾಖಲೆಗಳನ್ನು ಕೇಳಿದಾಗ, ಅವನ ಬಳಿ ಯಾವುದೇ ಕಾಗದ ಪತ್ರಗಳಿರಲಿಲ್ಲ. ತಕ್ಷಣವೇ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು, ಜಾನುವಾರುಗಳನ್ನು ರಕ್ಷಿಸಿದರು. ಲಾರಿಯಲ್ಲಿದ್ದ ಉಳಿದ ಮೂವರು ಓಡಿ ತಪ್ಪಿಸಿಕೊಂಡಿದ್ದಾರೆ.
ಲಾರಿಯಲ್ಲಿ ಒಟ್ಟು 9 ಎತ್ತು ಮತ್ತು 4 ಕೋಣಗಳಿದ್ದು, ಅವು ಮಹಾರಾಷ್ಟ್ರದ ಪಾಲೇಗಾಂವ್ನಿಂದ ಭಟ್ಕಳದತ್ತ ಸಾಗುತ್ತಿದವು. ಈ ಸಂಬಂಧ, ಔರಂಗಾಬಾದ್ ಜಿಲ್ಲೆಯ ಜಮೀಲ್ ಯೂಸುಫ್ ಶೇಖ್ (49) ಎಂಬಾತನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.
ಈ ಕಾರ್ಯಾಚರಣೆ ಹಿಂದು ಜಾಗರಣ ವೇದಿಕೆಯ ಮಾಹಿತಿ ಆಧಾರದ ಮೇಲೆ ಡಿವೈಎಸ್ಪಿ ಮಹೇಶ್ ಕೆ ಅವರ ಮಾರ್ಗದರ್ಶನದಲ್ಲಿ ಜರುಗಿತು. ಪಿಎಸೈ ರನ್ನ ಗೌಡ ಪಾಟೀಲ ಮತ್ತು ಭರ್ಮಪ್ಪ ಬೆಳಗಲಿ ನೇತೃತ್ವದಲ್ಲಿ ಎಎಸ್ಐ ಕೃಷ್ಣಾನಂದ ನಾಯ್ಕ, ಪೊಲೀಸ್ ಸಿಬ್ಬಂದಿ ಬಸವರಾಜ ಡಿ ಕೆ, ಮೋಹನ ಕಬ್ಬೇರ, ವೀರಣ್ಣ ಬಳ್ಳಾರಿ, ಲೋಹಿತ್ ಕುಮಾರ ಎಂ.ಪಿ., ಅಂಬರೀಶ ಕುಂಬಾರಿ ಮತ್ತು ಕಿರಣ ತಿಳಗಂಜಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…