ಭಟ್ಕಳ ತಾಲ್ಲೂಕಿನ ಶಿರಾಲಿ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಲಾರಿಗೆ ತಡೆ ನೀಡಿದ ಸಂದರ್ಭದಲ್ಲಿ, 13 ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ರಾಜಾರೋಷವಾಗಿ ಕೊಂಡೊಯ್ಯಲಾಗುತ್ತಿತ್ತು ಎಂಬುದನ್ನು ಪತ್ತೆಹಚ್ಚಿದ್ದಾರೆ.
ಪೊಲೀಸರು ಲಾರಿ ಚಾಲಕನಿಗೆ ದಾಖಲೆಗಳನ್ನು ಕೇಳಿದಾಗ, ಅವನ ಬಳಿ ಯಾವುದೇ ಕಾಗದ ಪತ್ರಗಳಿರಲಿಲ್ಲ. ತಕ್ಷಣವೇ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು, ಜಾನುವಾರುಗಳನ್ನು ರಕ್ಷಿಸಿದರು. ಲಾರಿಯಲ್ಲಿದ್ದ ಉಳಿದ ಮೂವರು ಓಡಿ ತಪ್ಪಿಸಿಕೊಂಡಿದ್ದಾರೆ.
ಲಾರಿಯಲ್ಲಿ ಒಟ್ಟು 9 ಎತ್ತು ಮತ್ತು 4 ಕೋಣಗಳಿದ್ದು, ಅವು ಮಹಾರಾಷ್ಟ್ರದ ಪಾಲೇಗಾಂವ್ನಿಂದ ಭಟ್ಕಳದತ್ತ ಸಾಗುತ್ತಿದವು. ಈ ಸಂಬಂಧ, ಔರಂಗಾಬಾದ್ ಜಿಲ್ಲೆಯ ಜಮೀಲ್ ಯೂಸುಫ್ ಶೇಖ್ (49) ಎಂಬಾತನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.
ಈ ಕಾರ್ಯಾಚರಣೆ ಹಿಂದು ಜಾಗರಣ ವೇದಿಕೆಯ ಮಾಹಿತಿ ಆಧಾರದ ಮೇಲೆ ಡಿವೈಎಸ್ಪಿ ಮಹೇಶ್ ಕೆ ಅವರ ಮಾರ್ಗದರ್ಶನದಲ್ಲಿ ಜರುಗಿತು. ಪಿಎಸೈ ರನ್ನ ಗೌಡ ಪಾಟೀಲ ಮತ್ತು ಭರ್ಮಪ್ಪ ಬೆಳಗಲಿ ನೇತೃತ್ವದಲ್ಲಿ ಎಎಸ್ಐ ಕೃಷ್ಣಾನಂದ ನಾಯ್ಕ, ಪೊಲೀಸ್ ಸಿಬ್ಬಂದಿ ಬಸವರಾಜ ಡಿ ಕೆ, ಮೋಹನ ಕಬ್ಬೇರ, ವೀರಣ್ಣ ಬಳ್ಳಾರಿ, ಲೋಹಿತ್ ಕುಮಾರ ಎಂ.ಪಿ., ಅಂಬರೀಶ ಕುಂಬಾರಿ ಮತ್ತು ಕಿರಣ ತಿಳಗಂಜಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…