ಗೌರಿಬಿದನೂರು: ತಾಲೂಕಿನ ಅಲ್ಲೀಪುರದಿಂದ ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಕ್ವಾಲೀಸ್ ವಾಹನವನ್ನು ಮತ್ತು ಗೋಮಾಂಸವನ್ನು ಮಂಚೇನಹಳ್ಳಿ ಪೊಲೀಸರು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ತಮಗೆ ದೊರೆದ ಖಚಿತ ಮಾಹಿತಿಯನ್ನು ಆಧರಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಪಿ. ಮೂರ್ತಿ ತಮ್ಮ ಸಿಬ್ಬಂದಿಯೊಂದಿಗೆ ಅಲ್ಲೀಪುರ ಪುಲಗಾನಹಳ್ಳಿ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಸಂಧರ್ಭದಲ್ಲಿ, ಪೊಲೀಸರನ್ನು ಕಂಡ ಅಕ್ರಮ ಗೋಮಾಂಸ ಸಾಗಾಣಿಕೆದಾರರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ವಾಹನವನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಸುಮಾರು ಸಾವಿರದ ಇನ್ನೂರು ಕೇಜಿ ಗೋಮಾಂಸ ಪತ್ತೆಯಾಗಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಗೋಪಾಲ್,  ಶಿವಶಂಕರ್ ಹಾಗೂ ಸಿಬ್ಬಂದಿಗಳಾದ ಸಂತೋಷ್ ರಮೇಶ್‌ ಪಾಲ್ಗೊಂಡಿದ್ದರು. ವರದಿ :ಅವಿನಾಶ್

Related News

error: Content is protected !!