ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಬುಧವಾರ ಮುಂಜಾನೆ ಮುಂಡಗೋಡದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರ ನಿರ್ದೇಶನದಂತೆ ಹಾಗೂ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ಗಳು ಮತ್ತು ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿರುವವರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಶೋಧನೆ ಮಾಡಲಾಯಿತು.
ಮಾನ್ಯ ನ್ಯಾಯಾಲಯದ ಆದೇಶ ಪಡೆದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಮೇಶ ಹಾನಾಪುರ, ಪೊಲೀಸ್ ಉಪನಿರೀಕ್ಷಕ ಮಂಜುನಾಥ ಗೌಡ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಒಟ್ಟು 14 ಮಂದಿಯ ಮನೆಗಳನ್ನು ಶೋಧನೆಗೆ ಒಳಪಡಿಸಿ ಪರಿಶೀಲನೆ ನಡೆಸಲಾಯಿತು.
ಕಿರಣ ಸೋಳಂಕಿ, ಮಂಜು ನವಲೆ, ಮಲ್ಲಿಕಜಾನ್ ಅಲಿಯಾಸ್ ಜಹೀರ್ ಶೇಖ್, ಮಹಮ್ಮದ್ ಸಾದೀಕ್ ಗಾಜೀಪೂರ, ವಾಸಿಂಖಾನ್ ಬೆಂಡಿಗೇರಿ, ಮಕ್ಖುಲ್ ಅಹಮದ್ ಯಳ್ಳೂರು, ಮದುಸಿಂಗ್ ರಜಪೂತ್, ಮಂಜುನಾಥ ಹೋಟಕರ್ ಅಲಿಯಾಸ್ ಶೇರಖಾನೆ, ಮಹಮ್ಮದ್ ಇಬ್ರಾಹಿಂ ಅಲಿಯಾಸ್ ರಫಿಕ್ ಜಮಖಂಡಿ, ಹರುಣ ಶೇಖ್, ಮಹಮ್ಮದ್ ಯೂಸುಫ್ ಗಡವಾಲೆ, ಮಹಮ್ಮದ್ ಇಸ್ಮಾಯಿಲ್ ಪಾನಾವಾಲೆ, ಸಂಜು ನವಲೆ ಹಾಗೂ ತೌಸಿಫ್ ಅಹಮದ್ ಪಣಿಬಂದ ಅವರ ಮನೆಗಳನ್ನು ಪರಿಶೀಲಿಸಲಾಯಿತು.
ಮೀಟರ್ ಬಡ್ಡಿ ದಂಧೆಯ ಪ್ರಮುಖ ಆರೋಪಿ ಜಮೀರ್ ಅಹ್ಮದ್ ಹ ತ್ಯೆ ಪ್ರಕರಣದ ಬಳಿಕ ಮುಂಡಗೋಡದಲ್ಲಿ ಅಕ್ರಮ ಬಡ್ಡಿ ವ್ಯವಹಾರಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಲುವು ತಾಳಿದ್ದು, ಇತ್ತೀಚೆಗೆ ಕೆಲ ರೌಡಿಶೀಟರ್ಗಳನ್ನು ಗಡಿಪಾರು ಮಾಡಲಾಗಿದ್ದು, ಇಂದು ಮನೆ ಶೋಧನೆ ನಡೆಸುವ ಮೂಲಕ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಪೊಲೀಸ್ ಇಲಾಖೆ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಮುಂದಿನ ದಿನಗಳಲ್ಲಿಯೂ ರೌಡಿಶೀಟರ್ಗಳು, ಅಕ್ರಮ ಬಡ್ಡಿ ವ್ಯವಹಾರ ನಡೆಸುವವರು ಹಾಗೂ ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…