ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಬುಧವಾರ ಮುಂಜಾನೆ ಮುಂಡಗೋಡದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರ ನಿರ್ದೇಶನದಂತೆ ಹಾಗೂ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ಗಳು ಮತ್ತು ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿರುವವರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಶೋಧನೆ ಮಾಡಲಾಯಿತು.
ಮಾನ್ಯ ನ್ಯಾಯಾಲಯದ ಆದೇಶ ಪಡೆದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಮೇಶ ಹಾನಾಪುರ, ಪೊಲೀಸ್ ಉಪನಿರೀಕ್ಷಕ ಮಂಜುನಾಥ ಗೌಡ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಒಟ್ಟು 14 ಮಂದಿಯ ಮನೆಗಳನ್ನು ಶೋಧನೆಗೆ ಒಳಪಡಿಸಿ ಪರಿಶೀಲನೆ ನಡೆಸಲಾಯಿತು.
ಕಿರಣ ಸೋಳಂಕಿ, ಮಂಜು ನವಲೆ, ಮಲ್ಲಿಕಜಾನ್ ಅಲಿಯಾಸ್ ಜಹೀರ್ ಶೇಖ್, ಮಹಮ್ಮದ್ ಸಾದೀಕ್ ಗಾಜೀಪೂರ, ವಾಸಿಂಖಾನ್ ಬೆಂಡಿಗೇರಿ, ಮಕ್ಖುಲ್ ಅಹಮದ್ ಯಳ್ಳೂರು, ಮದುಸಿಂಗ್ ರಜಪೂತ್, ಮಂಜುನಾಥ ಹೋಟಕರ್ ಅಲಿಯಾಸ್ ಶೇರಖಾನೆ, ಮಹಮ್ಮದ್ ಇಬ್ರಾಹಿಂ ಅಲಿಯಾಸ್ ರಫಿಕ್ ಜಮಖಂಡಿ, ಹರುಣ ಶೇಖ್, ಮಹಮ್ಮದ್ ಯೂಸುಫ್ ಗಡವಾಲೆ, ಮಹಮ್ಮದ್ ಇಸ್ಮಾಯಿಲ್ ಪಾನಾವಾಲೆ, ಸಂಜು ನವಲೆ ಹಾಗೂ ತೌಸಿಫ್ ಅಹಮದ್ ಪಣಿಬಂದ ಅವರ ಮನೆಗಳನ್ನು ಪರಿಶೀಲಿಸಲಾಯಿತು.
ಮೀಟರ್ ಬಡ್ಡಿ ದಂಧೆಯ ಪ್ರಮುಖ ಆರೋಪಿ ಜಮೀರ್ ಅಹ್ಮದ್ ಹ ತ್ಯೆ ಪ್ರಕರಣದ ಬಳಿಕ ಮುಂಡಗೋಡದಲ್ಲಿ ಅಕ್ರಮ ಬಡ್ಡಿ ವ್ಯವಹಾರಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಲುವು ತಾಳಿದ್ದು, ಇತ್ತೀಚೆಗೆ ಕೆಲ ರೌಡಿಶೀಟರ್ಗಳನ್ನು ಗಡಿಪಾರು ಮಾಡಲಾಗಿದ್ದು, ಇಂದು ಮನೆ ಶೋಧನೆ ನಡೆಸುವ ಮೂಲಕ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಪೊಲೀಸ್ ಇಲಾಖೆ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಮುಂದಿನ ದಿನಗಳಲ್ಲಿಯೂ ರೌಡಿಶೀಟರ್ಗಳು, ಅಕ್ರಮ ಬಡ್ಡಿ ವ್ಯವಹಾರ ನಡೆಸುವವರು ಹಾಗೂ ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…