ಬಿಹಾರದ ಸಸಾರಾಮ್ ಜಿಲ್ಲೆಯ ಒಂದು ಗ್ರಾಮದಲ್ಲಿ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸ್ ತಂಡದ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಘಟನೆ ವೇಳೆ ಕಲ್ಲು ತೂರಾಟ, ನೂಕುನುಗ್ಗಲು ನಡೆದಿದ್ದು, ಪೊಲೀಸರು ಗಾಯಗೊಂಡಿರುವುದರೊಂದಿಗೆ ಬಂಧಿತರನ್ನು ಬಲವಂತವಾಗಿ ಬಿಡುಗಡೆ ಮಾಡಲಾಗಿದೆ.
ಮಾಹಿತಿಯ ಪ್ರಕಾರ, ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿರುವ ಖಲೀಲ್ ಖುರೇಷಿ ಹಾಗೂ ಇನ್ನೊಬ್ಬ ಶಾಹಿದ್ ಖುರೇಷಿಯನ್ನು ಬಂಧಿಸಲು ಮುಫಾಸಿಲ್ ಠಾಣೆಯ ಪೊಲೀಸರು ಗ್ರಾಮಕ್ಕೆ ಧಾಳಿ ನಡೆಸಿದ್ದರು. ಆದರೆ, ಪೊಲೀಸ್ ಕಾರ್ಯಾಚರಣೆಯ ನಡುವೆಯೇ ಆರೋಪಿಗಳ ಕುಟುಂಬದವರು ಹಾಗೂ ಗ್ರಾಮದ ಕೆಲವರು ಸೇರಿ ತಂಡದ ಮೇಲೆ ಕಲ್ಲು ತೂರಾಟ ಆರಂಭಿಸಿದರು.
ಗಲಾಟೆಯಲ್ಲಿ ಹವಾಲ್ದಾರ್ ರಾಜೇಂದ್ರ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದು, ಇನ್ಸ್ಪೆಕ್ಟರ್ ಶತ್ರುಘ್ನ ಸಿನ್ಹಾ, ಕಾನ್ಸ್ಟೆಬಲ್ ಸುನೀಲ್ ಕುಮಾರ್ ಹಾಗೂ ಮಹಿಳಾ ಕಾನ್ಸ್ಟೆಬಲ್ ಸುನಿತಾ ಕುಮಾರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಸಾರಾಮ್ನ ಸದರ್ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಈ ಘಟನೆಯ ಹಿನ್ನೆಲೆಯಲ್ಲಿ ಮುಫಾಸಿಲ್ ಠಾಣೆ ಪೊಲೀಸರು 20 ಮಂದಿ ಹೆಸರಿತರು ಹಾಗೂ ಅನೇಕ ಅಪರಿಚಿತರ ವಿರುದ್ಧ ದಾಳಿ, ಅಡ್ಡಿಪಡಿಸುವುದು ಮತ್ತು ಕಾನೂನು ಅಧಿಕಾರಿಗಳಿಗೆ ತೊಂದರೆ ನೀಡಿದ ಆರೋಪಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…