ಬಿಹಾರದ ಸಸಾರಾಮ್ ಜಿಲ್ಲೆಯ ಒಂದು ಗ್ರಾಮದಲ್ಲಿ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸ್ ತಂಡದ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಘಟನೆ ವೇಳೆ ಕಲ್ಲು ತೂರಾಟ, ನೂಕುನುಗ್ಗಲು ನಡೆದಿದ್ದು, ಪೊಲೀಸರು ಗಾಯಗೊಂಡಿರುವುದರೊಂದಿಗೆ ಬಂಧಿತರನ್ನು ಬಲವಂತವಾಗಿ ಬಿಡುಗಡೆ ಮಾಡಲಾಗಿದೆ.
ಮಾಹಿತಿಯ ಪ್ರಕಾರ, ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿರುವ ಖಲೀಲ್ ಖುರೇಷಿ ಹಾಗೂ ಇನ್ನೊಬ್ಬ ಶಾಹಿದ್ ಖುರೇಷಿಯನ್ನು ಬಂಧಿಸಲು ಮುಫಾಸಿಲ್ ಠಾಣೆಯ ಪೊಲೀಸರು ಗ್ರಾಮಕ್ಕೆ ಧಾಳಿ ನಡೆಸಿದ್ದರು. ಆದರೆ, ಪೊಲೀಸ್ ಕಾರ್ಯಾಚರಣೆಯ ನಡುವೆಯೇ ಆರೋಪಿಗಳ ಕುಟುಂಬದವರು ಹಾಗೂ ಗ್ರಾಮದ ಕೆಲವರು ಸೇರಿ ತಂಡದ ಮೇಲೆ ಕಲ್ಲು ತೂರಾಟ ಆರಂಭಿಸಿದರು.
ಗಲಾಟೆಯಲ್ಲಿ ಹವಾಲ್ದಾರ್ ರಾಜೇಂದ್ರ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದು, ಇನ್ಸ್ಪೆಕ್ಟರ್ ಶತ್ರುಘ್ನ ಸಿನ್ಹಾ, ಕಾನ್ಸ್ಟೆಬಲ್ ಸುನೀಲ್ ಕುಮಾರ್ ಹಾಗೂ ಮಹಿಳಾ ಕಾನ್ಸ್ಟೆಬಲ್ ಸುನಿತಾ ಕುಮಾರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಸಾರಾಮ್ನ ಸದರ್ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಈ ಘಟನೆಯ ಹಿನ್ನೆಲೆಯಲ್ಲಿ ಮುಫಾಸಿಲ್ ಠಾಣೆ ಪೊಲೀಸರು 20 ಮಂದಿ ಹೆಸರಿತರು ಹಾಗೂ ಅನೇಕ ಅಪರಿಚಿತರ ವಿರುದ್ಧ ದಾಳಿ, ಅಡ್ಡಿಪಡಿಸುವುದು ಮತ್ತು ಕಾನೂನು ಅಧಿಕಾರಿಗಳಿಗೆ ತೊಂದರೆ ನೀಡಿದ ಆರೋಪಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…