Latest

ಔಷಧಿ ಪರಿವೀಕ್ಷಕ ಅಧಿಕಾರಿಗಳ ಕೊರತೆಯಿಂದ ಕಳಪೆ ಔಷಧಿಗಳು ಹಾವಳಿ; ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬಂಗಾರಪೇಟೆ: ಕರ್ನಾಟಕ ಸರ್ಕಾರ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಬಂಗಾರಪೇಟೆಯ ಮಾಗೊಂದಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ
ಬಂಗಾರಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ರಾಜ್ಯವ್ಯಪ್ತಿ ಆರೋಗ್ಯ ಇಲಾಖೆ ನಿರಂತರ ತಪಾಸಣೆ ನಡೆಸುತ್ತಿದ್ದಾರೆ, ಹಲವು ಕಡೆ ಕಳಪೆ ನಕಲಿ ಗುಣಮಟ್ಟದ ಆನೇಕ ಬಗೆಯ ಕಳಪೆ ಔಷಧಿಗಳು ಸಿಕ್ಕಿರುವ ಮಾಹಿತಿ ಗಮನಕ್ಕ್ ಬಂದಿದೆ ಔಷಧಿ ಪರಿವೀಕ್ಷಕ ಅಧಿಕಾರಿಗಳ ತೀವ್ರ ಕೊರತೆ ಕರ್ನಾಟಕ ಎದುರಿಸುತ್ತಿದೆ. ಇದರ ಪರಿಣಾಮ, ಕಳಪೆ ಗುಣಮಟ್ಟದ ಔಷಧಿ ಪೂರೈಕೆ ಜಾಲವನ್ನು ನಿರ್ಮೂಲನೆ ಗೊಳಿಸುವ ಯತ್ನಕ್ಕೆ ತೊಂದರೆ ಉಂಟಾಗಿದ್ದು, ಇಲಾಖೆ ಈಗಾಗಲೇ ಇದರ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಖಾಲಿ ಇರುವ ಔಷಧಿ ಪರಿವೀಕ್ಷಕ ಅಧಿಕಾರಿ ಗಳನ್ನು ನೇಮಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಎಂದು ತಿಳಿಸಿದರು.

ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಮತ್ತು ಡಿ-ಗ್ರೂಪ್ ನೌಕರರ ಕೊರತೆ ಇದ್ದು ಹಾಗು ಸ್ಕ್ಯಾನಿಂಗ್ ಟೆಕ್ನಿಷಿಯನ್‌ ಗಳ ಕೊರತೆ ಸಹಾ ಇದ್ದು ಖಾಸಗಿ ಆಸ್ಪತ್ರೆ ಟಿಕ್ನಿಷಿಯನ್‌ ವಾರಕ್ಕೊಮ್ಮೆ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ಕೆಲಸ ಮಾಡಲು ಇಚ್ಚಿಸಿದವರಿಗೆ ಒಳ್ಳೆಯ ಸಂಬಳ ನೀಡಲಾಗುವುದು ಇದರ ಬಗ್ಗೆ  ಮುಖ್ಯಮಂತ್ರಿಗಳ ಬಳಿ ಚರ್ಚಿಸಿದ್ದೇನೆ, ಮುಖ್ಯಮಂತ್ರಿಗಳ ಅನುಮೋದನೆ ಸಿಕ್ಕ ಕೂಡಲೇ ಅಗತ್ಯವಿರುವ ಕಡೆಗಳಲ್ಲಿ ಕೂಡಲೇ ಸಿಬ್ಬಂದಿಗಳನ್ನು ನೇಮಕ ಮಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕರಾದ ಶ್ರೀ. ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ , ಆಸ್ಪತ್ರೆಯ ಆಡಳಿತಾಧಿಕಾರಿ ಡಾಕ್ಟರ್ ಭಾರತಿ, ಡಾಕ್ಟರ ಸುಧಾಕರ್, ಮತ್ತು ಸಾರ್ವಜನಿಕರು ಹಾಜರಿದ್ದರು. ವರದಿ: ರೋಶನ್ ಜಮೀರ್

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

5 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

5 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

5 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago